ಟೈರ್ ಸ್ಫೋಟಗೊಂಡು ವಾಹನ ಪಲ್ಟಿ: ನಾಲ್ವರ ಸಾವು
Tire burst and vehicle overturned: Four killed
ರಾಯಚೂರು 22: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಬುಧವಾರ ನಡೆದಿದೆ.
ಮೃತರನ್ನು ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಆರ್ಯವಂದನ್ (18), ಸುಚೇಂದ್ರ (22) ಮತ್ತು ಅಭಿಲಾಷ್ (20) ಎಂದು ಗುರ್ತಿಸಲಾಗಿದೆ. ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 