ಇಂದಿನ ಆರೋಗ್ಯದಾಯಕ ಮಕ್ಕಳೇ ನಾಳೆಯ ಸಧೃಡ ದೇಶದ ನಾಗರೀಕರು
Today's healthy children are tomorrow's prosperous citizens
ಚಡಚಣ 2 : ತಾಲೂಕಿನ ತದ್ದೇವಾಡಿ ಗ್ರಾಮದಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಲಾಯಿತು.ಅನೇಕ ರೋಗಗಳು ಅಶುದ್ಧ ಕುಡಿಯುವ ನೀರಿನಿಂದ ಬರುತ್ತದೆ ಎಂಬುದು ಎಲ್ಲರಿಗೂ ತಿಳಿದ ಮಾತಾಗಿದೆ ಹಾಗಾಗಿ ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಸ್ವಚ್ಚ ಹಾಗೂ ನೈರ್ಮಲ್ಯವಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಫಿಲ್ಟರ್ ಅಳವಡಿಕೆ ಮಾಡಲಾಯಿತು.
ಮಾತನಾಡಿದ ಶಾಲಾ ಮುಖ್ಯಗುರುಗಳು ಮಾತನಾಡಿ ಇದನ್ನು ಸ್ವಇಚ್ಛೆಯಿಂದ ಎಲ್ಲ ಎಸ್ಡಿಎಮ್ಸಿ ಸದಸ್ಯರು,ತದ್ದೇವಾಡಿಯ ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರ ಆರ್ಥಿಕ ನೆರವಿನಿಂದ ನೀರಿನ ಘಟಕವನ್ನು ಅಳವಡಿಸಲಾಯಿತು. ಅದಕ್ಕೆ ಎಲ್ಲ ಮಕ್ಕಳು ಹಾಗೂ ಪಾಲಕ ಪೋಷಕರು ಬಹಳಷ್ಟು ಸಂತೋಷಪಟ್ಟು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಜನ ಸೇವೆಯೇ ಜನಾರ್ಧನ ಸೇವೆ, ಇಂದಿನ ಆರೋಗ್ಯದಾಯಕ ಮಕ್ಕಳೇ ನಾಳೆಯ ಸಧೃಡ ದೇಶದ ನಾಗರೀಕರಾಗುತ್ತಾರೆ ಎಂಬ ನಾಣ್ಣುಡಿಯಂತೆ ತದ್ದೇವಾಡಿ ಗ್ರಾಮ ಮತ್ತು ನಮ್ಮ ಸರಕಾರಿ ಶಾಲೆ ನೈಜ ಉದಾಹರಣೆಯಾಗಿದೆ.ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು,ಗ್ರಾಮಸ್ಥರು, ಶಿಕ್ಷಕರು,ಪಾಲಕರು ಇದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 