ಇಂದು ಕಲಿಕಾ ಸಾಮರ್ಥ್ಯ ಹೆಚ್ಚಿದೆ : ಶಾಸಕ ಸಿದ್ದು ಸವದಿ
Today's learning ability has increased: MLA Siddu Savadi
ಮಹಾಲಿಂಗಪುರ, 02 : ಶಾಲೆಗಳು ದೇವಾಲಯಳಿದ್ದಂತೆ, ದೇವಾಲಯಗಳ ಹುಂಡಿಗೆ ಕಾಣಿಕೆ ಹಾಕುವ ಬದಲು ನಿಮ್ಮೂರಿನ ಶಾಲೆಗಳಿಗೆ ದೇಣಿಗೆ ನೀಡಿದರೆ ಅದೇ ದೇಶ ಸೇವೆ ಮತ್ತು ಈಶ ಸೇವೆಯಾಗುತ್ತದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಸಮೀಪದ ಸೈದಾಪುರದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಎಕ್ಸ್ಲೆಂಟ್ ಹಿರಿಯ ಪ್ರಾಥಮಿಕ ಶಾಲೆಯ ಮೊಗ್ಗಿನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿದೆ, ಆದ್ದರಿಂದ ಸ್ಪರ್ಧೆಯೂ ಹೆಚ್ಚಿದೆ, ಪಾಲಕರಿಗೂ ಶಿಕ್ಷಣದ ಮಹತ್ವ ತಿಳಿದಿದೆ ಕೂಲಿಮಾಡಿದರೂ ಮಕ್ಕಳನ್ನು ಶಾಲೆಗೆ ಕಳಿಸುತ್ತಿರುವುದು ರಾಷ್ಟ್ರದ ಹಿತದೃಷ್ಠಿಯಿಂದ ಉತ್ತಮ, ಸಂಸ್ಥಾಪಕ ಶಿವಲಿಂಗ ಪೋಳ ಅವರ ಶ್ರಮ ಸಾರ್ಥಕವಾಗಲಿ ಎಂದರು.
ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಮಹಾದೇವಾಶ್ರಮದ ಬಸವರಾಜ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಂಸ್ಕಾರವಿಲ್ಲದ ಶಿಕ್ಷಣ ವ್ಯರ್ಥ, ತಂದೆ, ತಾಯಿ, ಗುರುವನ್ನು ಗೌರವಿಸುವ ಶಿಕ್ಷಣ ನೀಡಿದರೆ ಭಾರತ ವಿಶ್ವಗುರುವಾಗಲು ಸಾಧ್ಯ ಎಂದರು.
ಸಂಸ್ಥೆಯ ಅಧ್ಯಕ್ಷ ಶಿವಲಿಂಗ ಪೋಳ ಅಧ್ಯಕ್ಷತೆ ವಹಿಸಿ, ಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ, ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಬಸವರಾಜ ಮಾನೆ, ಸುಹಾಸ ಇಂಗಳೆ, ಎಸ್.ಟಿ.ಪೋಳ ಮಾತನಾಡಿದರು. ನಾರನಗೌಡ ಉತ್ತಂಗಿ ಉಪನ್ಯಾಸ ನೀಡಿದರು.
ಪಿಕೆಪಿಎಸ್ ಅಧ್ಯಕ್ಷ ಬಸವಣ್ಣೆಪ್ಪ ಬ್ಯಾಳಿ, ಬಸವರಾಜ ನಾಗನೂರ, ವಿನಯ ಹೆಗ್ಗಳಗಿ, ಶಿವಪ್ಪ ಬಾಯಪ್ಪಗೋಳ, ಪಿಯೂಷ ಓಸ್ವಾಲ, ಆನಂದ ಬನಹಟ್ಟಿ, ಮುತ್ತನಾಯಕ ನಾಯಕ, ಬಸಪ್ಪ ಉಳ್ಳಾಗಡ್ಡಿ, ಮಲ್ಲನಗೌಡ ಪಾಟೀಲ,ಆರ್.ಕೆ.ನದಾಫ್, ಮಹಾಲಿಂಗಪ್ಪ ಬಾಯಪ್ಪಗೋಳ, ಶಿವಪ್ಪ ಹೋಳ್ಕರ್, ಪುಂಡಲೀಕ ಕೌಜಲಗಿ, ಸಿದ್ಧಾರೂಢ ಕೌಜಲಗಿ, ಕವಿತಾ ಕಾಂಬಳೆ, ತುಳಸವ್ವ ಲಮಾಣ, ರಾಮು ಪೋಳ ಇತರರಿದ್ದರು.
ಶಿಕ್ಷಕಿ ವಾಲಿಕಾರ ವರದಿ ವಾಚಿಸಿ, ಮುಖ್ಯೋಪಾಧ್ಯಾಯ ಎಸ್.ಎಂ.ಚವ್ಹಾಣ, ಶಿಕ್ಷಕಿ ಅಶ್ವಿನಿ ಸ್ವಾಗತಿಸಿ, ನಿರೂಪಿಸಿದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 