ಇಂದು ಚಿಮ್ಮಡ ಗ್ರಾಮದಲ್ಲಿ ಗವಿಸಿದ್ದೇಶ್ವರ ಶ್ರೀ ಸದ್ಭಾವನಾ ಪಾದಯಾತ್ರೆ
Today is Gavisiddeshwara Sri Sadbhavana Padayatra in Chimmada village
ಮಹಾಲಿಂಗಪುರ 25: ಸಮೀಪದ ಚಿಮ್ಮಡ ಗ್ರಾಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಸದ್ಭಾವನಾ ಪಾದಯಾತ್ರೆ ಇಂದು ನ.26ರಂದು ಬೆಳಗ್ಗೆ 6:30ಕ್ಕೆ ಜರುಗಲಿದೆ ಎಂದು ವಿರಕ್ತಮಠದ ಪ್ರಭು ಸ್ವಾಮೀಜಿ ತಿಳಿಸಿದ್ದಾರೆ.
ಸದ್ಭಾವನಾ ಪಾದಯಾತ್ರೆಯು ಬೆಳಗ್ಗೆ ಗ್ರಾಮದ ದುರ್ಗಾದೇವಿ ದೇವಸ್ಥಾನದಿಂದ ನೇತಾಜಿ ವೃತ್ತದ ಮಾರ್ಗವಾಗಿ ಭಜಂತ್ರಿ ಓಣಿ, ಕರಿಸಿದ್ದೇಶ್ವರ ದೇವಸ್ಥಾನ, ಯಲ್ಲಮ್ಮನ ಗುಡಿ, ಕನಕದಾಸ ವೃತ್ತದಿಂದ ಚನ್ನಮ್ಮ ವೃತ್ತ, ವಿರಕ್ತಮಠ, ವಿರಕ್ತಮಠ, ದಾಸಿಮಯ್ಯ ವೃತ್ತದ ಮಾರ್ಗದಿಂದ ಬಸ್ ನಿಲ್ದಾನದವರೆಗೆ ಮಾದಯಾತ್ರೆ ಜರುಗಲಿದೆ. ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬೆಳಗ್ಗೆ 7:30ಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ.
ಗ್ರಾಮಸ್ಥರು ಬೆಳಿಗ್ಗೆ ಮನೆ ಹಾಗೂ ಬೀದಿಗಳಲ್ಲಿ ರಂಗೋಲಿ ಹಾಕಿ ಗ್ರಾಮವನ್ನು ವಿಶೇಷವಾಗಿ ಸಿಂಗರಿಸಿ ಶ್ರೀಗಳನ್ನು ಭಕ್ತಿಯಿಂದ ಸ್ವಾಗತಿಸಬೇಕು ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಭಕ್ತರುಭಾಗವಹಿಸಿ ಗವಿಶ್ರೀಗಳ ದರ್ಶನ, ವಾಣಿಯನ್ನು ಕೇಳಿ ಪುನೀತರಾಗಬೇಕೆಂದು ಪ್ರಭುಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 