ಇಂದು ಸಾಮೂಹಿಕ (ನಿಖಾ) ವಿವಾಹ ಕಾರ್ಯಕ್ರಮ
ಲೋಕದರ್ಶನ ವರದಿ
ಕೊಪ್ಪಳ 18: ನಗರದ ಸದರ್ಾರಗಲ್ಲಿ ಮುಸ್ಲಿಂ ಪಂಚ್ ಕಮೀಟಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಹಜರತ್ ಮಹೆಬೂಬ ಸುಬಾನಿ (ರಅ) ಅವರ ಪವಿತ್ರ ಗ್ಯಾರವಿ ಷರೀಫ್ ಹಬ್ಬದ ಆಚರಣೆ ನಿಮಿತ್ಯ ಸತತ 17ನೇ ಬಾರಿಗೆ ಬಡ ಮುಸ್ಲಿಂ ಜೋಡಿಗಳ ಉಚಿತ ಸಾಮೂಹಿಕ (ನಿಖಾ) ವಿವಾಹ ಕಾರ್ಯಕ್ರಮ ಜ.19 ರ ರವಿವಾರ ಬೆಳಿಗ್ಗೆ 11.30 ಕ್ಕೆ ಸಾಲಾರ್ಜಂಗ್ ರಸ್ತೆ ಹೈದರಲಿ ಸರ್ಕಲ್ ಬಳಿ ಸರ್ಧಾರಗಲ್ಲಿ ಓಣಿಯಲ್ಲಿ ಜರುಗಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುಸ್ಲಿಂ ಧರ್ಮ ಗುರು ಮುಫ್ತಿ ಮೌಲಾನಾ ಮಹ್ಮದ್ ನಜೀರ್ ಅಹ್ಮದ್ ಖಾದ್ರಿ-ವ-ತಸ್ಕೀನಿ ರವರು ವಹಿಸಲಿದ್ದಾರೆ ಹಾಗೂ ಖಾಜಿ ಸಾಹೇಬರು ಪಾಲ್ಗೊಂಡು 05 ಜೋಡಿಗಳ ಸಾಮೂಹಿಕ ನಿಖಾ ಕಾರ್ಯಕ್ರಮ ನೆರವೇರಿಸಿಕೊಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸರ್ದಾರಗಲ್ಲಿ ಮುಸ್ಲಿಂ ಪಂಚ್ ಕಮೀಟಿ ಅಧ್ಯಕ್ಷ ಶಹಾಬುದ್ದೀನ್ ಸಾಬ ನೂರಬಾಷಾ ವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಯ್ಯದ್ ಫೌಂಡೇಶನ್ ಅಧ್ಯಕ್ಷ ಕೆ.ಎಂ.ಸಯ್ಯದ್, ತಾಲೂಕ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರೆಡ್ಡಿ, ಜೆಡಿಎಸ್ ಮುಖಂಡ ವೀರೇಶ ಮಹಾಂತಯ್ಯನಮಠ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ್ ಖಾದ್ರಿ, ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಮ್ಜದ್ ಪಟೇಲ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಪಾಷಾ ಕಾಟನ್, ಅಂಜುಮನ್ ಅಧ್ಯಕ್ಷ ಹುಸೇನ್ ಪೀರಾ ಮುಜಾವರ (ಚಿಕನ್), ಹಿರಿಯ ಪತ್ರಕರ್ತ ಎಂ.ಸಾದಿಕ್ ಅಲಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಸದರ್ಾರಗಲ್ಲಿ ಓಣಿಯ ಮಾನ್ವಿಪಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 