ಇಂದು ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ
ರಾಣೇಬೆನ್ನೂರು13: ತಾಲೂಕಿನ ಚೌಡಯ್ಯದಾನಪುರದಲ್ಲಿ ಮಕರ ಸಂಕ್ರಾಂತಿಯ ನಿಮಿತ್ಯ ಲಿಂ. ಶ್ರೀ ವಿರುಪಾಕ್ಷ ಒಡೆಯರವರ ಸ್ಮರಣೋತ್ಸವ ಹಾಗೂ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವವು ಮತ್ತು ನಾಲ್ವತ್ತವಾಡದ ಶರಣ ವಿರೇಶ್ವರರ ಪುರಾಣ ಮಂಗಲೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಒಡೆಯರ ಚಿತ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜ.14 ರಂದು ಜರುಗಲಿವೆ.
ಅಂದು ಬೆ.8 ಗಂಟೆಗೆ ಶ್ರೀವಿರುಪಾಕ್ಷ ಒಡೆಯರ ಹಾಗೂ ಶರಣ ಅಂಬಿಗರ ಚೌಡಯ್ಯನವರ ಮತ್ತು ಶ್ರೀ ಶಿವದೇವಮುನಿಗಳ ಭಾವಚಿತ್ರದ ಮೆರವಣಿಗೆ ಹಾಗೂ ಕುಂಭಮೇಳವು ಸಕಲ ವಾದ್ಯಗಳೊಂದಿಗೆ ಒಡೆಯರ ಸಂಸ್ಥಾನಮಠದಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತುಂಗಭದ್ರ ನದಿಯ ತಟದಲ್ಲಿರುವ ಶರಣ ಅಂಬಿಗರ ಚೌಡಯ್ಯನವರ ಐಕ್ಯಮಂಟಪಕ್ಕೆ ತಲುಪಿ ವಿವಿಧ ಧಾರ್ಮಿಕ ಪೂಜಾ ಪುನಸ್ಕಾರಗಳೊಂದಿಗೆ ಕುಂಭಾಭಿಷೇಕ ನಡೆಯುವುದು.
ನಂತರ ಶ್ರೀಗಳ ಮಠದಲ್ಲಿ ಪುರಾಣ ಮಂಗಲೋತ್ಸವ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವುದು. ನಾಡಿನ ಹರ-ಗುರು-ಚರಮೂರ್ತಿಗಳು, ಶರಣರ ತತ್ವಾನುಯಾಯಿಗಳು, ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಹಾಪ್ರಸಾದ ನಡೆಯುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 