ಇಂದು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು

ಇಂದು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು  Today it is the foundation stone of the Hemaraddy Mallamma temple

ಜಮಖಂಡಿ 28: ನಗರದ ಕುಂಚನೂರು ರಸ್ತೆಯ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ವೇಮ ವಿಕಾಸ ವೇದಿಕೆಯಿಂದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಡಿ. 29 ಸೋಮವಾರ ದಂದು ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಡಾ.ರಂಗನಾಥ ಸೋನವಾಲ್ಕರ ಹೇಳಿದರು. 

ನಗರದ ರಮಾನಿವಾಸ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಹರಿಹರ ತಾಲೂಕಿನ ಎರೆಹೊಸಳ್ಳಿ ಗ್ರಾಮದ ವೇಮನ ಸಂಸ್ಥಾನ ಮಠದ ವೇಮನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟಿಲ ಅಡಿಗಲ್ಲು ಪೂಜೆ ನೆರವೇರಿಸಲಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು. ಮುಖ್ಯ ಅತಿಥಿಗಳಾಗಿ ಸಚಿವರಾದ ಶರಣ ಬಸಪ್ಪ ದರ್ಶನಾಪೂರ, ಆರ್‌.ಬಿ.ತಿಮ್ಮಾಪೂರ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ಜೆ.ಟಿ.ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಹಣಮಂತ ನಿರಾಣಿ, ಪಿ.ಎಚ್‌.ಪೂಜಾರ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.  

ರಮೇಶ ಪಾಟೀಲ, ಹಣಮಂತ ಪಾಟೀಲ, ಸುರೇಶ ಗುಡದನ್ನವರ, ಅಶೋಕ ಸಂಕರಟ್ಟಿ, ಹಣಮಂತ ಮಾಸರಡ್ಡಿ, ವೆಂಕಪ್ಪ ನ್ಯಾಮಗೌಡ, ಡಾ, ಟಿ.ಪಿ.ಗಿರಡ್ಡಿ, ಎನ್‌.ಎಂ. ಸಂಕರಡ್ಡಿ ಸೇರಿಂದತೆ ಅನೇಕರು ಸುದ್ದಿಗೋಷ್ಠಿಯಲ್ಲಿ ಇದ್ದರು.