ನಾಳೆ ಚಿದಂಬರ ಮಹಾ ಸ್ವಾಮಿಗಳ 267ನೇ ಅವತಾರ ಜಯಂತಿ
Tomorrow is the 267th incarnation anniversary of Chidambaram Mahaswami
ಅಥಣಿ, 08 : ಚಿದಂಬರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ. ಅಥಣಿ ಶ್ರೀ ಚಿದಂಬರ ಮಹಾ ಸ್ವಾಮಿಗಳ 267ನೇ ಅವತಾರ ಜಯಂತಿ ಮಹೋತ್ಸವ ಶ್ರೀ ಚಿದಂಬರ ಸೇವಾ ಸಮಿತಿ ಆಶ್ರಯದಲ್ಲಿ ನವ್ಹೆಂಬರ 10 ಸೋಮವಾರದಂದು ಅಥಣಿಯ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದೆ.
ಮುಂಜಾನೆ 5.30ಕ್ಕೆ ಕಾಕಡಾರತಿ, 5.45ರಿಂದ 6.45 ರವರೆಗೆ ಶ್ರೀ ಚಿದಂಬರೇಶ್ವರ ನಾಮ ಸ್ನರಣೆ, 7 ರಿಂದ 10 30 ರವರೆಗೆ ರುದ್ರಾಭಿಷೇಕ, 10.45 ರಿಂದ11.45 ರವರೆಗೆ ವಾದಿರಾಜ ಜಂಬಗಿ ಇವರಿಂದ ಕೀರ್ತನೆ, 12 ಗಂಟೆಗೆ ಜನ್ಮೋತ್ಸವ ಸಮಾರಂಭ, ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ನೆರವೇರುವುದು. ಸಂಜೆ 7 ಗಂಟೆಗೆ ಶ್ರೀ ರಾಮದೇವರ ಹಾಗೂ ಶ್ರೀ ಶಿವ ಚಿದಂಬರ ಮಹಾಸ್ವಾಮಿಗಳವರ ಕಾರ್ತಿಕೋತ್ಸವ, ಭಜನೆ, ಸಂಗೀತ ಸೇವೆ, ಮಂತ್ರ ಪುಷ್ಪ, ಮಹಾ ಮಂಗಳಾರತಿಯೊಂದಿಗೆ ಜಯಂತೋತ್ಸವ ಮುಕ್ತಾಯಗೊಳ್ಳಲಿದೆ.
ಈ ಕಾರ್ಯಕ್ರಮಗಳ ಮೊದಲ ದಿನ ನವ್ಹೆಂಬರ 9 ಭಾನುವಾರ ಸಂಜೆ 6 ಗಂಟೆಗೆ ಶ್ರೀ ವಿಠ್ಠಲ ಮಂದಿರದಿಂದ ಕರಡಿ ಮಜಲು, ಭಜನಾ ಮಂಡಳಿಗಳ ಭಜನೆ, ಸುಮಂಗಲೆಯರ ಆರತಿಯೊಂದಿಗೆ ಶ್ರೀ ಶಿವ ಚಿದಂಬರ ಮಹಾ ಸ್ವಾಮಿಗಳ ಭಾವ ಚಿತ್ರವಿರುವ ಪಲ್ಲಕ್ಕಿ ಮೆರವಣಿಗೆ ಶ್ರೀರಾಮ ಮಂದಿರಕ್ಕೆ ಆಗಮಿಸಿ ಸಂಜೆ 7 ಗಂಟೆಗೆ ಅಲಂಕಾರ, ವಿಪ್ರರಿಂದ ವೇದಘೋಷಣೆ, ಸಕಲ ಪೂಜೆಯೊಂದಿಗೆ ಭಾವಚಿತ್ರವನ್ನು ಭಕ್ತರ ಸಮ್ಮುಖದಲ್ಲಿ ಪ್ರತಿಷ್ಢಾಪಿಸಲಾಗುವುದು ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಸೇವಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 