ನಾಳೆಯಿಂದ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ
ಲೋಕದರ್ಶನವರದಿ
ರಾಣಿಬೆನ್ನೂರ11: ನಗರದ ಮೇಡ್ಲೇರಿ ರಸ್ತೆಯ ಗ್ರಾಮ ದೇವತೆ ಶ್ರೀ ಗಂಗಾಜಲ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಜ.13 ರಿಂದ 18ರ ವರೆಗೆ ನಡೆಯಲಿದೆ.
ಜ.13 ರಂದು ಬೆಳಗ್ಗೆ 6ಕ್ಕೆ ದೇವಿಯ ಮೂರ್ತಿಗೆ ತಳವಾರಗಲ್ಲಿಯ ಮೂಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ಸಂಜೆ 6ಕ್ಕೆ ಉತ್ಸವ ಮೂರ್ತಿ ಯನ್ನು ಭಾಜಾ, ಬಜಂತ್ರಿ, ಡೊಳ್ಳು, ಕೋಲಾಟ, ಆನೆಯ ಮೆರವಣಿಗೆ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗಂಗಾಜಲದಲ್ಲಿ ಶೃಂಗರಿಸಿದ ಮಂಟಪದಲ್ಲಿ ದೇವಿಯ ಮೂರ್ತಿ ಯ ಪ್ರತಿಷ್ಠಾಪನೆ ಮಾಡಲಾಗುವುದು.
ಜ.14ರಂದು ದೇವಿಯ ಉಡಿ ತಂಬುವ ಕಾರ್ಯಕ್ರಮ, ಮಹಾ ಪೂಜಾ ನೈವೇದ, ಹರಕೆ ಸಲ್ಲಿಸುವ ಕಾರ್ಯಕ್ರಮ. ಜ.15 ರಂದು ಓಕಳಿ ಉತ್ಸವ ಮಧ್ಯಾಹ್ನ ಬೆಲ್ಲದ ಬಂಡಿಯ ಮೆರವಣಿಗೆ ಜ.18ರಂದು ಸಂಜೆ 6.30ಕ್ಕೆ ದೇವಿಯ ಮೂರ್ತಿ ಯನ್ನು ಪುನಃ ತಳವಾರಗಲ್ಲಿಯ ಮೂಲ ದೇವಸ್ಥಾನಕ್ಕೆ ಕರೆತರಲಾಗುವುದು ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 