ಯುಟರ್ನ ಹೊಡೆದ ಪ್ರವಾಸೋದ್ಯಮ ಇಲಾಖೆ : ನದಿ ಹಿನ್ನೀರಿನಲ್ಲಿ ಬೋಟಿಂಗ್ ಮುಂದುವರಿಕೆ
Tourism Department of Utter Nata: Boating to continue in river backwaters
ಕಾರವಾರ 21 : ಹವಾಮಾನ ವೈಪರೀತ್ಯ ಕಡಿಮೆಯಾದ ಕಾರಣ ಕಡಲತೀರ, ನದಿ ಹಿನ್ನೀರಿನಲ್ಲಿ ಬೋಟಿಂಗ್ ಪ್ರೀವೆಡ್ಡಿಂಗ್ ಶೂಟ್ , ಸ್ಕೂಬಾ ಡೈವಿಂಗ್, ಜಲ ಸಾಹಸ ಕ್ರೀಡೆಗಳನ್ನು ಮುಂದುವರಿಸಬಹುದು ಎಂದು ಉತ್ತರ ಕನ್ನಡ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳ ಗೌರಿ ಮರು ಆದೇಶ ಹೊರಡಿಸಿದ್ದಾರೆ. ಅವರು ಮಂಗಳವಾರ ಹೊರಡಿಸಿದ ಆದೇಶದಿಂದ ಹಿಂದೆ ಸರಿದಿದ್ದು, ಯುಟರ್ನ ತೆಗೆದುಕೊಂಡಿದ್ದಾರೆ.
ಉಪ ನಿರ್ದೇಶಕರು, ಜಿಲ್ಲಾಧಿಕಾರಿ ಗಮನಕ್ಕೆ ವಿಷಯ ತಾರದೇ ಆದೇಶ ಹೊರಡಿಸಿದ್ದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಹವಾಮಾನ ಇಲಾಖೆಯಿಂದ ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಅಲ್ಲದೆ ಮಳೆಗಾಲ ಕೂಡ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ, ಬೋಟಿಂಗ್ ಮತ್ತು ಜಲ ಸಾಹಸ ಕ್ರೀಡೆಗಳು ಸೇರಿದಂತೆ ಎಲ್ಲಾ ಚಟುವಟಿಕೆಯನ್ನು ಸ್ಥಗಿತಗೊಳಿಸಲು ತಿಳಿಸಲಾಗಿತ್ತು. ಆದರೆ ಮೇ 19 ರ ಸಂಜೆ ಯಿಂದ ಕಡಲ ತೀರದಲ್ಲಿ ಅಬ್ಬರದ ಅಲೆಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿರುತ್ತದೆ.
ಅಲ್ಲದೇ ದೂರದ ಊರುಗಳಿಂದ ಬರುವ ಪ್ರವಾಸಿಗರಿಗೆ ನಿರಾಶೆಯಾಗಬಾರದೆಂಬ ದೃಷ್ಠಿಯಿಂದ ವಾತಾವರಣವನ್ನು ಪರಿಗಣಿಸಿಕೊಂಡು, ಸುರಕ್ಷಿತಾ ಕ್ರಮಗಳನ್ನು ಅನುಸರಿಸಿಕೊಂಡು ಸದರಿ ಎಲ್ಲಾ ಚಟುವಟಿಕೆಗಳನ್ನು ಮುಂದಿನ ಆದೇಶದ ವರೆಗೆ ಕೈಗೊಳ್ಳಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಹಾಗೂ ರಿವರ್ ರಾಪ್ಟಿಂಗ್ ಮತ್ತು ಜಲ ಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹೊಸ ಆದೇಶ ದಿಂದ ಪ್ರವಾಸೋದ್ಯಮ ಇಲಾಖೆ ಮಂಗಳವಾರ ಹೊರಡಿಸಿದ ಆದೇಶ ದಿಂದ ಹಿಂದೆ ಸರಿದಂತಾಗಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 