ಬಾಬರ್, ಔರಂಗಜೇಬನ ಸಂಪ್ರದಾಯ ಮರೆಯಾಗಲಿದೆ : ಸಿಎಂ ಯೋಗಿ
Tradition of Babur, Aurangzeb will disappear: CM Yogi
ಲಕ್ನೋ 17:
ವರದಿಗಳ ಪ್ರಕಾರ, ಘೋಷಣೆಗಳನ್ನು ಕೂಗುವುದು ಮತ್ತು ಹಿಂದೂ ರ್ಯಾಲಿಗಳನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಾದುಹೋಗಲು ಅವಕಾಶ ನೀಡುವುದು ಕೋಮು ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂಬ ವಿರೋಧ ಪಕ್ಷದ ಸಲಹೆಯನ್ನು ಉಲ್ಲೇಖಿಸಿ ಅವರು ಈ ಟೀಕೆಗಳನ್ನು ಮಾಡಿದ್ದಾರೆ.
ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂಗಳು ಮೆರವಣಿಗೆ ಮಾಡಬಾರದು ಎಂದು ಸಂವಿಧಾನದಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ಯೋಗಿ ಪ್ರಶ್ನಿಸಿದ್ದಾರೆ. ಮಸೀದಿಯ ಮುಂಭಾಗದಿಂದ ಹಾದು ಹೋಗಲು ಹಿಂದೂಗಳ ಮೆರವಣಿಗೆಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ಕೇಳಿ ನಾನು ಅಚ್ಚರಿಗೊಂಡಿದ್ದೇನೆ. ಈ ರಸ್ತೆಗಳು ಯಾರಿಗೆ ಸೇರಿವೆ? ಇದು ಸಾರ್ವಜನಿಕ ರಸ್ತೆ…ನೀವು ಅವರನ್ನು ಹೇಗೆ ತಡೆಯುತ್ತೀರಿ? ಎಂದು ಸಿಎಂ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಬಹ್ರೈಚ್ ನಲ್ಲಿ ನಡೆದ ಘಟನೆಯನ್ನು ಉದಾಹರಿಸಿದ ಸಿಎಂ ಯೋಗಿ, ಸಾಂಪ್ರದಾಯಿಕ ಮೆರವಣಿಗೆಗೆ ಎಲ್ಲಾ ಸಿದ್ಧತೆ ನಡೆಸಿದ್ದರೂ, ಅದನ್ನು ತಡೆದು ನಿಲ್ಲಿಸಲಾಗಿತ್ತು. ಅಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ್ದರಿಂದ ಮೆರವಣಿಗೆಗೆ ಅವಕಾಶ ನೀಡಿಲ್ಲ ಎನ್ನುವುದಾದರೆ, ಜೈ ಶ್ರೀರಾಮ್ ಎಂಬುದು ಪ್ರಚೋದನೆಕಾರಿಯೇ? ಇದು ನಮ್ಮ ಭಕ್ತಿ ಮತ್ತು ನಂಬಿಕೆಯ ಪ್ರತೀಕವಾಗಿದೆ ಎಂದು ಪ್ರತಿಪಾದಿಸಿದರು. ಅವರು ಕೂಡಾ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾರೆ…ಒಂದು ವೇಳೆ ನಾನು ಅಲ್ಲಾಹು ಅಕ್ಬರ್ ಘೋಷಣೆ ನನಗೆ ಇಷ್ಟವಿಲ್ಲ ಎಂದು ಹೇಳಿದರೆ, ನೀವು ಅದನ್ನು ಒಪ್ಪಿಕೊಳ್ಳುವಿರಾ ಎಂದು ಸಿಎಂ ಯೋಗಿ ಪ್ರಶ್ನಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 