ಬಾಬರ್, ಔರಂಗಜೇಬನ ಸಂಪ್ರದಾಯ ಮರೆಯಾಗಲಿದೆ : ಸಿಎಂ ಯೋಗಿ
Tradition of Babur, Aurangzeb will disappear: CM Yogi
ಲಕ್ನೋ 17:
ವರದಿಗಳ ಪ್ರಕಾರ, ಘೋಷಣೆಗಳನ್ನು ಕೂಗುವುದು ಮತ್ತು ಹಿಂದೂ ರ್ಯಾಲಿಗಳನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಾದುಹೋಗಲು ಅವಕಾಶ ನೀಡುವುದು ಕೋಮು ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂಬ ವಿರೋಧ ಪಕ್ಷದ ಸಲಹೆಯನ್ನು ಉಲ್ಲೇಖಿಸಿ ಅವರು ಈ ಟೀಕೆಗಳನ್ನು ಮಾಡಿದ್ದಾರೆ.
ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂಗಳು ಮೆರವಣಿಗೆ ಮಾಡಬಾರದು ಎಂದು ಸಂವಿಧಾನದಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ಯೋಗಿ ಪ್ರಶ್ನಿಸಿದ್ದಾರೆ. ಮಸೀದಿಯ ಮುಂಭಾಗದಿಂದ ಹಾದು ಹೋಗಲು ಹಿಂದೂಗಳ ಮೆರವಣಿಗೆಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ಕೇಳಿ ನಾನು ಅಚ್ಚರಿಗೊಂಡಿದ್ದೇನೆ. ಈ ರಸ್ತೆಗಳು ಯಾರಿಗೆ ಸೇರಿವೆ? ಇದು ಸಾರ್ವಜನಿಕ ರಸ್ತೆ…ನೀವು ಅವರನ್ನು ಹೇಗೆ ತಡೆಯುತ್ತೀರಿ? ಎಂದು ಸಿಎಂ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಬಹ್ರೈಚ್ ನಲ್ಲಿ ನಡೆದ ಘಟನೆಯನ್ನು ಉದಾಹರಿಸಿದ ಸಿಎಂ ಯೋಗಿ, ಸಾಂಪ್ರದಾಯಿಕ ಮೆರವಣಿಗೆಗೆ ಎಲ್ಲಾ ಸಿದ್ಧತೆ ನಡೆಸಿದ್ದರೂ, ಅದನ್ನು ತಡೆದು ನಿಲ್ಲಿಸಲಾಗಿತ್ತು. ಅಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ್ದರಿಂದ ಮೆರವಣಿಗೆಗೆ ಅವಕಾಶ ನೀಡಿಲ್ಲ ಎನ್ನುವುದಾದರೆ, ಜೈ ಶ್ರೀರಾಮ್ ಎಂಬುದು ಪ್ರಚೋದನೆಕಾರಿಯೇ? ಇದು ನಮ್ಮ ಭಕ್ತಿ ಮತ್ತು ನಂಬಿಕೆಯ ಪ್ರತೀಕವಾಗಿದೆ ಎಂದು ಪ್ರತಿಪಾದಿಸಿದರು. ಅವರು ಕೂಡಾ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾರೆ…ಒಂದು ವೇಳೆ ನಾನು ಅಲ್ಲಾಹು ಅಕ್ಬರ್ ಘೋಷಣೆ ನನಗೆ ಇಷ್ಟವಿಲ್ಲ ಎಂದು ಹೇಳಿದರೆ, ನೀವು ಅದನ್ನು ಒಪ್ಪಿಕೊಳ್ಳುವಿರಾ ಎಂದು ಸಿಎಂ ಯೋಗಿ ಪ್ರಶ್ನಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 