ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ
ಬೆಂಗಳೂರು, ಆ.28- ಮೆಜಿಸ್ಟಿಕ್ನಿಂದ ಪ್ರೀಡಂ ಪಾಕರ್್ವರೆಗೆ ಟ್ರಾಫಿಕ್ಜಾಮ್ ಆಗಿ ವಾಹನ ಸವಾರರು, ಸಾರ್ವಜನಿಕರು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಪರದಾಡಬೇಕಾಯಿತು.ಸಿಐಟಿಯು ನೇತೃತ್ವದಲ್ಲಿಂದು ಪಂಚಾಯತ್ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಸಕರ್ಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು.ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ ಗ್ರಾಪಂ, ತಾಪಂ, ಜಿಪಂ ನೌಕರರು ರೈಲಿನಿಂದ ಆಗಮಿಸಿ ಬೆಳಗ್ಗೆ 11 ಗಂಟೆ ಮೆಜೆಸ್ಟಿಕ್ನಿಂದ ಪ್ರೀಡಂ ಪಾಕರ್್ವರೆಗೆ ಮೆರವಣಿಗೆಯಲ್ಲಿ ಹೊರಟರು.
ಅಸಂಖ್ಯಾತ ಜನ ಸೇರಿದ್ದರಿಂದ ಪ್ರಮುಖ ರಸ್ತೆಗಳಲ್ಲೇ ವಾಹನಗಳು ನಿಲ್ಲಬೇಕಾಯಿತು. ಮೆಜೆಸ್ಟಿಕ್ ಸುತ್ತಮುತ್ತ, ಶಿವಾಜಿನಗರದ ಕಡೆಗೆ, ಕೆ.ಆರ್.ಮಾರುಕಟ್ಟೆ, ಆನಂದರಾವ್ ವೃತ್ತದ ಕಡೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲೂ ವಾಹನಗಳ ಸಾಗರವೇ ಕಂಡು ಬಂದಿತು.
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು, ಆಟೋಗಳು, ದ್ವಿಚಕ್ರ ವಾಹನಗಳು, ಕ್ಯಾಬ್ಗಳು ಸೇರಿದಂತೆ ಸಕರ್ಾರಿ ಖಾಸಗಿ ವಾಹನಗಳು ಒಂದಿಂಚೂ ಮುಂದೆ ಚಲಿಸಲಾಗದೆ ತೀವ್ರ ತೊಂದರೆ ಅನುಭವಿಸಬೇಕಾಯಿತು. ಶಾಲಾ-ಕಾಲೇಜು, ಕಚೇರಿಗಳಿಗೆ ಹೋಗುವವರು ಟ್ರಾಫಿಕ್ ಜಾಮ್ನಿಂದ ತೀವ್ರ ಅಡಚಣೆಯಾಯಿತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 