ಕ್ಲಾರ್ಟ್ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಕ್ರಮ
ಕೊಪ್ಪಳ 05: ಪರಿಸರ ಭದ್ರತೆಗಾಗಿ ಪ್ರತಿಷ್ಠಾನ (ಫೌಂಡೇಷನ್ ಫಾರ್ ಎಕೊಲಾಜಿಕಲ್ ಸೆಕ್ಯುರಿಟಿ) ಸಂಸ್ಥೆಯ ವತಿಯಿಂದ ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್ ಬೇಸ್ಡ್ ಪ್ಲ್ಯಾನಿಂಗ್) ಆಧಾರದ ಯೋಜನೆಗಳನ್ನು ಅಳವಡಿಸಿಕೊಂಡು ಕಾಮಗಾರಿಗಳ ಗುಚ್ಚ ತಯಾರಿಸುವಲ್ಲಿ ಜಲಸಂರಕ್ಷಣಾ ಕಾಮಗಾರಿಗಳನ್ನು ಆಯ್ಕೆ ಮಾಡುವಲ್ಲಿ ಕ್ಲಾಟರ್್ ತಂತ್ರಜ್ಞಾನವನ್ನು ಬಳಕೆ ಮಾಡುವ ಕುರಿತಂತೆ ತಾಂತ್ರಿಕ ಸಂಯೋಜಕರು / ಸಹಾಯಕರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಪ್ರೋಗ್ರಾಮ್ ಮ್ಯಾನೇಜರ್ ಸುರೇಶ ಮತ್ತು ಹರೀಶ, ಸಂಪನ್ಮೂಲ ವ್ಯಕ್ತಿ ಸುನೀಲ್ ಕುಮಾರ್ ಮಾತನಾಡಿ ಪ್ರಾತ್ಯಕ್ಷಿಕೆ ಮೂಲಕ ರಿಡ್ಜ್ ಟು ವ್ಯಾಲಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಕುರಿತು ತಿಳಿಸಿದರು. ನಂತರ ತರಬೇತಿದಾರರೊಂದಿಗೆ ಗಿಣಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಡದಾಳ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ತಾಂತ್ರಿಕ ಅಂಶಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ ಎನ್.ಕೆ.ತೊರವಿ, ಎ.ಡಿ.ಪಿ.ಸಿ, ಡಿ.ಐ.ಇ.ಸಿ, ಡಿ.ಎಂ.ಐ.ಎಸ್ ಸೇರಿದಂತೆ ಜಿಲ್ಲೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್, ಅರಣ್ಯ, ತೋಟಗಾರಿಕೆ ಮತ್ತು ಕೃಷಿ) ರವರು ತರಬೇತಿದಾರರಾಗಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 