ಕ್ಲಾರ್ಟ್ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಕ್ರಮ
ಕೊಪ್ಪಳ 05: ಪರಿಸರ ಭದ್ರತೆಗಾಗಿ ಪ್ರತಿಷ್ಠಾನ (ಫೌಂಡೇಷನ್ ಫಾರ್ ಎಕೊಲಾಜಿಕಲ್ ಸೆಕ್ಯುರಿಟಿ) ಸಂಸ್ಥೆಯ ವತಿಯಿಂದ ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್ ಬೇಸ್ಡ್ ಪ್ಲ್ಯಾನಿಂಗ್) ಆಧಾರದ ಯೋಜನೆಗಳನ್ನು ಅಳವಡಿಸಿಕೊಂಡು ಕಾಮಗಾರಿಗಳ ಗುಚ್ಚ ತಯಾರಿಸುವಲ್ಲಿ ಜಲಸಂರಕ್ಷಣಾ ಕಾಮಗಾರಿಗಳನ್ನು ಆಯ್ಕೆ ಮಾಡುವಲ್ಲಿ ಕ್ಲಾಟರ್್ ತಂತ್ರಜ್ಞಾನವನ್ನು ಬಳಕೆ ಮಾಡುವ ಕುರಿತಂತೆ ತಾಂತ್ರಿಕ ಸಂಯೋಜಕರು / ಸಹಾಯಕರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಪ್ರೋಗ್ರಾಮ್ ಮ್ಯಾನೇಜರ್ ಸುರೇಶ ಮತ್ತು ಹರೀಶ, ಸಂಪನ್ಮೂಲ ವ್ಯಕ್ತಿ ಸುನೀಲ್ ಕುಮಾರ್ ಮಾತನಾಡಿ ಪ್ರಾತ್ಯಕ್ಷಿಕೆ ಮೂಲಕ ರಿಡ್ಜ್ ಟು ವ್ಯಾಲಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಕುರಿತು ತಿಳಿಸಿದರು. ನಂತರ ತರಬೇತಿದಾರರೊಂದಿಗೆ ಗಿಣಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಡದಾಳ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ತಾಂತ್ರಿಕ ಅಂಶಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ ಎನ್.ಕೆ.ತೊರವಿ, ಎ.ಡಿ.ಪಿ.ಸಿ, ಡಿ.ಐ.ಇ.ಸಿ, ಡಿ.ಎಂ.ಐ.ಎಸ್ ಸೇರಿದಂತೆ ಜಿಲ್ಲೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್, ಅರಣ್ಯ, ತೋಟಗಾರಿಕೆ ಮತ್ತು ಕೃಷಿ) ರವರು ತರಬೇತಿದಾರರಾಗಿ ಹಾಜರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 