ಕ್ಲಾರ್ಟ್ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಕ್ರಮ
ಕೊಪ್ಪಳ 05: ಪರಿಸರ ಭದ್ರತೆಗಾಗಿ ಪ್ರತಿಷ್ಠಾನ (ಫೌಂಡೇಷನ್ ಫಾರ್ ಎಕೊಲಾಜಿಕಲ್ ಸೆಕ್ಯುರಿಟಿ) ಸಂಸ್ಥೆಯ ವತಿಯಿಂದ ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್ ಬೇಸ್ಡ್ ಪ್ಲ್ಯಾನಿಂಗ್) ಆಧಾರದ ಯೋಜನೆಗಳನ್ನು ಅಳವಡಿಸಿಕೊಂಡು ಕಾಮಗಾರಿಗಳ ಗುಚ್ಚ ತಯಾರಿಸುವಲ್ಲಿ ಜಲಸಂರಕ್ಷಣಾ ಕಾಮಗಾರಿಗಳನ್ನು ಆಯ್ಕೆ ಮಾಡುವಲ್ಲಿ ಕ್ಲಾಟರ್್ ತಂತ್ರಜ್ಞಾನವನ್ನು ಬಳಕೆ ಮಾಡುವ ಕುರಿತಂತೆ ತಾಂತ್ರಿಕ ಸಂಯೋಜಕರು / ಸಹಾಯಕರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಪ್ರೋಗ್ರಾಮ್ ಮ್ಯಾನೇಜರ್ ಸುರೇಶ ಮತ್ತು ಹರೀಶ, ಸಂಪನ್ಮೂಲ ವ್ಯಕ್ತಿ ಸುನೀಲ್ ಕುಮಾರ್ ಮಾತನಾಡಿ ಪ್ರಾತ್ಯಕ್ಷಿಕೆ ಮೂಲಕ ರಿಡ್ಜ್ ಟು ವ್ಯಾಲಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಕುರಿತು ತಿಳಿಸಿದರು. ನಂತರ ತರಬೇತಿದಾರರೊಂದಿಗೆ ಗಿಣಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಡದಾಳ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ತಾಂತ್ರಿಕ ಅಂಶಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ ಎನ್.ಕೆ.ತೊರವಿ, ಎ.ಡಿ.ಪಿ.ಸಿ, ಡಿ.ಐ.ಇ.ಸಿ, ಡಿ.ಎಂ.ಐ.ಎಸ್ ಸೇರಿದಂತೆ ಜಿಲ್ಲೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್, ಅರಣ್ಯ, ತೋಟಗಾರಿಕೆ ಮತ್ತು ಕೃಷಿ) ರವರು ತರಬೇತಿದಾರರಾಗಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 