ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳ ಸಂಚಾರ
ಚೆನ್ನೈ, ನ 9: ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ದಕ್ಷಿಣ ರೈಲ್ವೆ ಚೆನ್ನೈನಿಂದ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಿದೆ. ಚೆನ್ನೈ- ತಿರುವನಂತಪುರಂ ಮತ್ತು ಚೆನ್ನೈ-ಕೊಲ್ಲಂ ನಡುವೆ ನವೆಂಬರ್ ಮಧ್ಯಭಾಗದಿಂದ ದಿಂದ ಡಿಸೆಂಬರ್ ಮೊದಲ ವಾರದವರೆಗೆ ಈ ರೈಲುಗಳು ಸಂಚರಿಸಲಿವೆ. ದಕ್ಷಿಣ ರೈಲ್ವೆ ಚೆನ್ನೈ ಮತ್ತು ತಿರುವನಂತಪುರಂ ನಡುವೆ ಎರಡು ವಿಶೇಷ ರೈಲು ಸಂಚಾರ ಮಾಡಲಿದೆ. ಈ ರೈಲುಗಳು ನ.21 ಮತ್ತು 28 ರಂದು ಚೆನ್ನೈ ಸೆಂಟ್ರಲ್ ನಿಂದ ಹೊರಡಲಿದ್ದು, ನ.22 ಮತ್ತು 29ರಂದು ಬೆಳಗ್ಗೆ ತಿರುವನಂತಪುರ ತಲುಪಲಿವೆ. ವಿಶೇಷ ರೈಲುಗಳು ಅರಕ್ಕೋಣಂ, ಕಟ್ಪಾಡಿ, ಜೋಲಾರ್ ಪೇಟ್ , ಸೇಲಂ, ಕೊಯಮತ್ತೂರು ಮತ್ತು ಪಾಲಕ್ಕಾಡಿ ನಲ್ಲಿ ನಿಲುಗಡೆ ಮಾಡಲಿವೆ. ಇನ್ನು ತಿರುವನಂತಪುರದಿಂದ ಇದೇ .20, 27ರಂದು ಮಧ್ಯಾಹ್ನ 3.45ಕ್ಕೆ ಹೊರಡುವ ರೈಲುಗಳು 21, 28ರಂದು ಬೆಳಿಗ್ಗೆ ಚೆನ್ನೈಸೆಂಟ್ರಲ್ ತಲುಪಲಿದ್ದು . ಚೆನ್ನೈ ಮತ್ತು ಕೊಲ್ಲಂ ನಡುವೆ ಮೂರು ವಿಶೇಷ ರೈಲು ಸಂಚರಿಸಲಿವೆ ಎಂದೂ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 