ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳ ಸಂಚಾರ
ಚೆನ್ನೈ, ನ 9: ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ದಕ್ಷಿಣ ರೈಲ್ವೆ ಚೆನ್ನೈನಿಂದ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಿದೆ. ಚೆನ್ನೈ- ತಿರುವನಂತಪುರಂ ಮತ್ತು ಚೆನ್ನೈ-ಕೊಲ್ಲಂ ನಡುವೆ ನವೆಂಬರ್ ಮಧ್ಯಭಾಗದಿಂದ ದಿಂದ ಡಿಸೆಂಬರ್ ಮೊದಲ ವಾರದವರೆಗೆ ಈ ರೈಲುಗಳು ಸಂಚರಿಸಲಿವೆ. ದಕ್ಷಿಣ ರೈಲ್ವೆ ಚೆನ್ನೈ ಮತ್ತು ತಿರುವನಂತಪುರಂ ನಡುವೆ ಎರಡು ವಿಶೇಷ ರೈಲು ಸಂಚಾರ ಮಾಡಲಿದೆ. ಈ ರೈಲುಗಳು ನ.21 ಮತ್ತು 28 ರಂದು ಚೆನ್ನೈ ಸೆಂಟ್ರಲ್ ನಿಂದ ಹೊರಡಲಿದ್ದು, ನ.22 ಮತ್ತು 29ರಂದು ಬೆಳಗ್ಗೆ ತಿರುವನಂತಪುರ ತಲುಪಲಿವೆ. ವಿಶೇಷ ರೈಲುಗಳು ಅರಕ್ಕೋಣಂ, ಕಟ್ಪಾಡಿ, ಜೋಲಾರ್ ಪೇಟ್ , ಸೇಲಂ, ಕೊಯಮತ್ತೂರು ಮತ್ತು ಪಾಲಕ್ಕಾಡಿ ನಲ್ಲಿ ನಿಲುಗಡೆ ಮಾಡಲಿವೆ. ಇನ್ನು ತಿರುವನಂತಪುರದಿಂದ ಇದೇ .20, 27ರಂದು ಮಧ್ಯಾಹ್ನ 3.45ಕ್ಕೆ ಹೊರಡುವ ರೈಲುಗಳು 21, 28ರಂದು ಬೆಳಿಗ್ಗೆ ಚೆನ್ನೈಸೆಂಟ್ರಲ್ ತಲುಪಲಿದ್ದು . ಚೆನ್ನೈ ಮತ್ತು ಕೊಲ್ಲಂ ನಡುವೆ ಮೂರು ವಿಶೇಷ ರೈಲು ಸಂಚರಿಸಲಿವೆ ಎಂದೂ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 