ದೇಶದ್ರೋಹಿಗಳು ಆದಿತ್ಯ, ಅಬ್ದುಲ್ಲಾ ಯಾರೇ ಆಗಿದ್ದರೂ ಗಲ್ಲಿಗೇರಿಸಿ: ಮುತಾಲಿಕ್
ಹೊಸಪೇಟೆ, ಜ 23 : ದೇಶದ ಸುರಕ್ಷತೆಗೆ ಸವಾಲೊಡ್ಡುವವರು ಆದಿತ್ಯ ರಾವ್ ಅಥವಾ ಅಬ್ದುಲ್ಲಾ ಯಾರೇ ಆಗಿರಲಿ ಅಂತಹವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದ್ದರೆ.
ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿರೋಧಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಬಾಂಬ್ ಇಟ್ಟು ಶರಣಾಗಿರುವ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಾಗಿದ್ದರೂ ಆತನ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.
‘ಹಿಂದೂಗಳ ದೇಶವಾಗಿರುವ ಭಾರತದಲ್ಲಿ ‘ಹಿಂದೂ ಟೆರರ್’ ಎಂಬುದು ಕಾಂಗ್ರೆಸ್ ನ ಕಟ್ಟು ಕತೆ. ದೇಶದಲ್ಲಿ ಹಿಂದೂ ಟೆರರ್ ಇಲ್ಲ. ಆದರೆ, ‘ಇಸ್ಲಾಮಿಕ್ ಟೆರರ್’ ಇರುವುದಕ್ಕೆ ಅನೇಕ ದಾಖಲೆಗಳಿವೆ ಎಂದರು.
ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಾಲಿಶನತದ್ದು. ಪೊಲೀಸರು, ದೇಶದ ಸೈನಿಕರ ಮನೋಸ್ಥೈರ್ಯ ಕುಂದಿಸುವಂತಹ ಹೇಳಿಕೆಗಳನ್ನು ನೀಡುವುದುನ್ನು ನಾನು ಕಟುವಾಗಿ ಖಂಡಿಸುತ್ತೇನೆ ಎಂದರು.
‘ಹಿಂದೂಗಳನ್ನು ಕೆಣಕಿದರೆ ಸುಮ್ಮನಿರಲ್ಲ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ನೀಡಿರುವ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 