ಸರಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಪ್ರಕ್ರಿಯೆ ನಿರಂತರ ಪ್ರಕ್ರಿಯೆ : ಡಾ.ಹನುಮಂತಪ್ಪ
Transfer and retirement process in government service is a continuous process: Dr. Hanumanthappa
ಸರಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಪ್ರಕ್ರಿಯೆ ನಿರಂತರ ಪ್ರಕ್ರಿಯೆ : ಡಾ.ಹನುಮಂತಪ್ಪ
ಶಿಗ್ಗಾವಿ 1: ಸರಕಾರಿ ಸೇವೆಯಲ್ಲಿ ವರ್ಗಾವಣೆ ಹಾಗೂ ಪದೋನ್ನತಿ ಮತ್ತು ನಿವೃತ್ತಿ ಪ್ರಕ್ರಿಯೆ ನಿರಂತರವಾಗಿ ನಡೆಯುವ ಪ್ರಕ್ರಿಯೆ ಎಂದು ನಿವೃತ್ತ ತಜ್ಞ ವೈದ್ಯ ಡಾ.ಹನುಮಂತಪ್ಪ. ಪಿ.ಹೆಚ್ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಸ್ವಾಗತ ಹಾಗೂ ಬೀಳ್ಕೋಡುವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಆಗಮಿಸುತ್ತಾರೆ ಅವರಿಗೆ ಉತ್ತಮ ಸೇವೆ ಸಲ್ಲಿಸಿದರೇ ಅದು ನಮಗೆ ಕ್ರೆಡಿಟ್ ರೂಪದಲ್ಲಿ ಜಮಾ ಆಗುತ್ತದೆ ಎಂದರು. ವರ್ಗಾವಣೆ ಹೊಂದಿದ ತಜ್ಞ ವೈದ್ಯರಾದ ಡಾ.ಲಕ್ಷ್ಮಣ ನಾಯ್ಕ, ಡಾ.ಗುರುರಾಜ, ಡಾ.ಸುಭಾಸ ಲೋಖ್ರೆ, ಡಾ.ವಿವೇಕ ಜೈನಕೇರಿ, ಡಾ.ವಿಧ್ಯಾವತಿ ಬ್ಯಾಟಪ್ಪನವರ, ಶುಶ್ರೂಷಾ ಅಧಿಕಾರಿಗಳಾದ ಆರ್. ಸಾರಮ್ಮ, ಉಮಾ ಮುಳಗುಂದ, ವನಿತಾ ಕುರಂದವಾಡ, ಓಷಧಿ ವಿತರಕ ಅಧಿಕಾರಿ ನೀಲಮ್ಮ ಹಿರೇಮಠ ಸೇರಿದಂತೆ ವಯೋ ನಿವೃತ್ತಿ ಹೊಂದಿದ ಸುಭಾಸಚಂದ್ರ ತಳವಾರ ಅವರನ್ನು ಸನ್ಮಾನಿಸಲಾಯಿತು. ನಂತರ ನೂತನವಾಗಿ ಆಗಮಿಸಿದ ತಜ್ಞ ವೈದ್ಯರಾದ ಡಾ.ಮಲ್ಲಿಕಾರ್ಜುನಯ್ಯ, ಡಾ.ಅಶೋಕ, ಡಾ.ಬಸಿರಾ, ನಿಂಗಪ್ಪ ಹರ್ಲಾಪೂರ, ಜಯಶ್ರೀ ಹೋತನಹಳ್ಳಿಯವರನ್ನು ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ತಜ್ಞ ವೈದ್ಯರಾದ ಡಾ.ತಬುಸುಮ್, ಡಾ.ರಾಜೇಶ್ವರಿ ಚನ್ನಪ್ಪಗೌಡ್ರ, ಡಾ.ಪಾಟೀಲ, ಡಾ.ರೈತಾ, ಶುಶ್ರೂಷಾ ಅಧೀಕ್ಷಕಿ ಸುಶೀಲಾ ದೇವಸೂರ, ಸಹಾಯಕ ಆಡಳಿತಾಧಿಕಾರಿ ಮಂಜುನಾಥ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 