ಶಿರಗುಪ್ಪಿಯಲ್ಲಿ ಚಹಾ ಅಂಗಡಿಗೆ ನುಗ್ಗಿದ ಸಾರಿಗೆ ಬಸ್
Transport bus crashes into tea shop in Shiraguppi
ಲೋಕದರ್ಶನ ವರದಿ
ಕಾಗವಾಡ 14: ತಾಲೂಕಿನ ಶಿರಗುಪ್ಪಿ ಗ್ರಾಮದ ಕಾಗವಾಡ ರಸ್ತೆಯಲ್ಲಿರುವ ಚಹಾ ಅಂಗಡಿಗೆ ಕಾಗವಾಡ ಕಡೆಯಿಂದ ಚಿಕ್ಕೋಡಿ ಕಡೆ ಹೋರಟಿದ್ದ ಕರ್ನಾಟಕ ಸಾರಿಗೆ ಬಸ್ ನುಗ್ಗಿದ್ದು, ಅಂಗಡಿ ಸಂಪೂರ್ಣ ನುಜ್ಜುಗುಜ್ಜಾಗಿದೆ.ಘಟನೆಯಲ್ಲಿ ಅದೃಷ್ಟವಶಾತ ಚಹಾ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಭಾರಿ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಮತ್ತು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 