ಕೊರೊನಾ ಸೋಂಕು ಹೆಚ್ಚುತ್ತಿರುವ ರಾಷ್ಟ್ರಗಳಿಗೆ ಇರಾಕ್ ನಿಂದ ಪ್ರಯಾಣ ನಿರ್ಬಂಧ
ಬಾಗ್ದಾದ್, ಫೆ 27: ಕೊರೊನಾ ಸೋಂಕು ವ್ಯಾಪಿಸುತ್ತಿರುವ ರಾಷ್ಟ್ರಗಳಿಗೆ ಪ್ರಯಾಣಿಸದಂತೆ ಇರಾಕ್ ಪ್ರಾಧಿಕಾರ ನಿರ್ಬಂಧ ವಿಧಿಸಿದೆ. ಕೊರೊನಾ ಸೋಂಕು ವಿರುದ್ಧದ ಹೋರಾಟದಲ್ಲಿ ಸರ್ಕಾರದ ಸಮಿತಿ ಮಾಡಿರುವ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆ.ಜಪಾನ್, ದಕ್ಷಿಣ ಕೊರಿಯಾ, ಥಾಯ್ಲೆಂಡ್, ಸಿಂಗಾಪುರ, ಇಟಲಿ, ಕುವೈತ್ ಮತ್ತು ಬಹ್ರೇನ್ ಗಳಿಗೆ ಪ್ರಯಾಣ ಬೆಳೆಸದಂತೆ ಸೂಚಿಸಲಾಗಿದೆ. ಈ ನಿರ್ಬಂಧ ಅಧಿಕೃತ ಪ್ರತಿನಿಧಿಗಳು ಮತ್ತು ರಾಜತಾಂತ್ರಿಕರಿಗೆ ಅನ್ವಯವಾಗುವುದಿಲ್ಲ. ಅಲ್ಲದೇ ಫೆ 27 ರಿಂದ ಮಾರ್ಚ್ 7 ರವರೆಗೆ ಸಿನಿಮಾ, ಕೆಫೆ, ಕ್ಲಬ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವಂತೆ ನಿರ್ಬಂಧ ವಿಧಿಸಲಾಗಿದ್ದು ಸಾರ್ವಜನಿಕ ಸಮಾರಂಭಗಳನ್ನು ಏರ್ಪಡಿಸದಂತೆಯೂ ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಶಾಲಾ ಕಾಲೇಜು ತರಗತಿಗಳೂ ಇರುವುದಿಲ್ಲ ಎಂದು ಹೇಳಲಾಗಿದೆ. ಬಾಗ್ದಾದ್ ನಲ್ಲಿ ಸೋಮವಾರ ಕೊರೊನಾ ವೈರಾಣು ಸೋಂಕಿನ ಮೊದಲ ಪ್ರಕರಣ ವರದಿಯಾಗಿತ್ತು. ಇರಾನ್ ಮೂಲದ ವಿದ್ಯಾರ್ಥಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ನಂತರ ಇರಾನ್ ನಿಂದ ಪ್ರವಾ ಮುಗಿಸಿ ವಾಪಸಾದ ಒಂದೇ ಕುಟುಂಬದ ಇತರ ನಾಲ್ವರಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 