ಯರಗೊಪ್ಪ ಗ್ರಾಮದಲ್ಲಿ ಗಿಡ ನಾಟಿ ಮಾಡುವ ಕಾರ್ಯಕ್ರಮ
Tree planting program in Yaragoppa village
ಬೈಲಹೊಂಗಲ 20 : ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ 2025-26ನೇ ಸಾಲಿನಲ್ಲಿ ಯರಗೊಪ್ಪ ಸರ್ಕಾರಿ ಕೆರೆಯ ಹೂಳೆತ್ತಲಾದ ಕೆರೆ ಅಂಗಳದಲ್ಲಿ ಗಿಡ ನಾಟಿ ಮಾಡುವ ಕಾರ್ಯಕ್ರಮವನ್ನು ಧರ್ಮಸ್ಥಳ ಯೋಜನೆಯಿಂದ ಹಮ್ಮಿಕೊಳ್ಳಲಾಯಿತು. ಧಾರವಾಡ ಪ್ರಾದೇಶಿಕ ನಿರ್ದೆಶಕರಾದ ದಯಾಶೀಲ ಅವರು ಉದ್ಘಾಟನೆ ಮಾಡಿ ಕೆರೆ ಸುತ್ತಲೂ ಗಿಡ ನಾಟಿ ಮಾಡಿ ಕಾಪಾಡಿ ಬೆಳೆಸಿ ಪರಿಸರವನ್ನು ಮುಂದಿನ ಪೀಳಿಗೆ ಅನುಕೂಲಕರವಾಗುತ್ತದೆ ಎಂದರು.
ಬಸವರಾಜ ಹಲ್ಕಿ ಕೆರೆ ಸಮಿತಿ ಅಧ್ಯಕ್ಷರು ಶಿವಾನಂದ ಎಕ್ಕುಂಡಿ, ಶಾಲಾ ಶಿಕ್ಷಕರು ಧರ್ಮಸ್ಥಳ ಯೋಜನೆಯಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳಿದ್ದು ಅವರು ಮಾಡಿಕೊಟ್ಟಿರುವ ಈಕೆರೆಯನ್ನು ಸ್ವಚ್ಛತೆ ಕಾಪಾಡಿಕೊಂಡು ಗಿಡಗಳ ರಕ್ಷಣೆ ಪಾಲನೆ ಮಾಡೋಣ ಎಂದರು. ಒಕ್ಕೂಟ ಅಧ್ಯಕ್ಷರು ಕೆರೆ ಸಮಿತಿ ಎಲ್ಲಾ ಸದಸ್ಯರು ರೈತ ಬಾಂಧವರು ಯೋಜನಾಧಿಕಾರಿಗಳು ವಲಯದ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಸಂಘದ ಸರ್ವ ಸದಸ್ಯರು ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ 