ಡಾ.ಪ್ರಭುಗೌಡ ಲಿಂಗದಳ್ಳಿಗೆ ಗೌರವ ಸಮರೆ​‍್ಣ

ಡಾ.ಪ್ರಭುಗೌಡ ಲಿಂಗದಳ್ಳಿಗೆ ಗೌರವ ಸಮರೆ​‍್ಣ  Tribute to Dr. Prabhugowda Lingadalli

ತಾಳಿಕೋಟಿ 31: ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ವೃಷಭೇಂದ್ರೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜೀವನ ದರ್ಶನ ಪ್ರವಚನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಡಾ.ಪ್ರಭುಗೌಡ ಲಿಂಗದಳ್ಳಿ ಅವರನ್ನು ಸಮಾಜಮುಖಿ ಸೇವಾ ಕಾರ್ಯಗಳಿಗಾಗಿ ಜಾತ್ರಾ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮಿಗಳು, ಕೊಡಗಾನೂರಿನ ಕುಮಾರ ದೇವರು, ಗ್ರಾಮದ ಗಣ್ಯರು ಹಿರಿಯರು ಹಾಗೂ ಭಕ್ತರು ಇದ್ದರು.