ಹಂದಿಗುಂದ ಶಿವಾನಂದ ಸ್ವಾಮೀಜಿಗಳಿಗೆ ಗೌರವ ಸನ್ಮಾನ
Tribute to Handigunda Shivananda Swamiji
ಪಾಲಬಾವಿ 15 : ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಶ್ರೀ ಚನ್ನವಿರೇಶ್ವರ ವಿರಕ್ತಮಠದಲ್ಲಿ ಬಸವ ಪುರಾಣ ಮಂಗಳ ಹಾಗೂ ಪಂಚಪೂಜ್ಯರ ಗದ್ದುಗೆಗಳ ಲೋಕಾರೋ್ಣತ್ಸವವು ಕಳೆದ ಫೆಬ್ರವರಿ 23 ರಿಂದ ಮಾರ್ಚ್ 15 ರ ವರೆಗೆ "ಬಸವ ಪುರಾಣ" ವನ್ನು ನಡೆಸಿಕೊಟ್ಟ ಪ್ರಯುಕ್ತ ಬಸವ ಪುರಾಣ ಮಂಗಲೋತ್ಸವದ ಕಾರ್ಯಕ್ರಮದಲ್ಲಿ ಹಂದಿಗುಂದ ಸಿದ್ದೇಶ್ವರ ವಿರಕ್ತಮಠದ ಪೂಜ್ಯರು ಪೀಠಾಧಿಪತಿ ಶಿವಾನಂದ ಮಹಾ ಸ್ವಾಮಿಗಳನ್ನು ಮುಳ್ಳಹಳ್ಳಿಯ ವಿರಕ್ತಮಠದ ಶಿವಯೋಗಿಶ್ವರ ಸ್ವಾಮಿಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ಯೋಗೇಂದ್ರ ಸ್ವಾಮೀಜಿ ಸೇರಿಕೊಂಡು ಪೂಜ್ಯರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಂಟೂರ ರಾಮಲಿಂಗೇಶ್ವರ ಸ್ವಾಮೀಜಿ, ಶಿವರುದ್ರಯ್ಯ ಕಲಬುರಗಿಮಠ, ಶಾಂತಕುಮಾರ ಗದ್ದಿಗೆಮಠ ಉಪಸ್ಥಿತರಿದ್ದರು.ಫೋಟೋ ಶೀರ್ಷಿಕೆ: ಮುಳ್ಳಹಳ್ಳಿ ವಿರಕ್ತಮಠದಲ್ಲಿ ಬಸವ ಪುರಾಣ ಮಂಗಲೋತ್ಸವದಲ್ಲಿ ಹಂದಿಗುಂದ ಸಿದ್ದೇಶ್ವರ ವಿರಕ್ತಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿರವರನ್ನು ಗೌರವಿಸಿ ಸನ್ಮಾನಿಸುತ್ತಿರುವುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 