ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿಗೆ ಸನ್ಮಾನ
Tribute to Padma Shri awardee Manjamma Jogati
ಲೋಕದರ್ಶನ ವರದಿ
ಕಂಪ್ಲಿ 13: ಪಟ್ಟಣದ ಸಣಾಪುರ ರಸ್ತೆಯ ಶಾದಿ ಮಹಲ್ನಲ್ಲಿ ಜೆಸಿಐ ಕಂಪ್ಲಿ ಸೋನಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ ಉದ್ಘಾಟಿಸಿ ಮಾತನಾಡಿ, ಜೆಸಿಐ ಯುವಕರಲ್ಲಿ ನಾಯಕತ್ವವ ಗುಣಗಳನ್ನು ಬೆಳೆಸುವ ಮಹತ್ವದ ಸಂಸ್ಥೆಯಾಗಿದ್ದು, 164 ರಾಷ್ಟ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರರಾಷ್ಟ್ರೀಯ ಸೇವಾ ಸಂಘಟನೆಯಾಗಿದೆ.
ಪಕ್ಷ, ಲಿಂಗ, ಜಾತಿ ಭೇದವಿಲ್ಲದೆ ಎಲ್ಲರನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ನಿಜವಾದ ದೇವರು ಕಾಯಕವೇ ಆಗಿದ್ದು, ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಗೌರವದಿಂದ ನರ್ವಹಿಸಬೇಕು. ಸಮಯಪ್ರಜ್ಞೆ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮುಖ್ಯ ಎಂದು ತಿಳಿಸಿದರು. ತೃತೀಯಲಿಂಗಿ ಮಕ್ಕಳಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು, ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದಲ್ಲಿ ಗೌರವಾನ್ವಿತ ಸ್ಥಾನಮಾನ ಪಡೆಯುವಂತೆ ಮಾಡಬೇಕು ಎಂದು ಮನವಿ ಮಾಡಿದರು. ವಿದ್ಯಾವಂತ ತೃತೀಯಲಿಂಗಿಗಳನ್ನು ಜೆಸಿಐ ಸದಸ್ಯರನ್ನಾಗಿ ಸೇರಿಸಿಕೊಳ್ಳುವ ಮೂಲಕ ಸಮಾಜಮುಖಿ ಕರ್ಯಗಳನ್ನು ಇನ್ನಷ್ಟು ವಿಸ್ತರಿಸಬೇಕು ಎಂದರು.
ವೈದ್ಯರಾದ ಡಾ. ಹರಿಕಾ ಮಾತನಾಡಿ, ಹುಡುಗಿಯರಲ್ಲಿ ಆರೋಗ್ಯ ಜಾಗೃತಿ ಅತ್ಯಂತ ಅಗತ್ಯವಾಗಿದೆ. ವಿಶೇಷವಾಗಿ ಕಬ್ಬಿಣದ ಅಂಶದ ಕೊರತೆ (ಅನೀಮಿಯಾ) ಸಮಸ್ಯೆ ಸಾಮಾನ್ಯವಾಗಿದ್ದು, ಅದರ ಪರಿಣಾಮಗಳು ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ವಿವರಿಸಿದರು. ಕಬ್ಬಿಣದ ಅಂಶವುಳ್ಳ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದು, ವಿಟಮಿನ್ ಸಿ ಇರುವ ಆಹಾರದ ಮಹತ್ವವನ್ನು ಅರಿತುಕೊಳ್ಳುವುದು ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಸಲಹೆ ನೀಡಿದರು. ವಿಜಯಲಕ್ಷ್ಮಿ (ವಕೀಲರು), ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಮೂಡಿಸಿದರು.
ಈ ಸಂರ್ಭದಲ್ಲಿ ಜೆಸಿಐ ಕಂಪ್ಲಿ ಸೋನಾದ ಅಧ್ಯಕ್ಷರಾದ ಭರತ್ ಪದ್ಮಶಾಲಿ, ಜೆಸಿಐ ವಲಯ 24ರ ವಲಯ ಅಧಿಕಾರಿ ಸಂತೋಷ್ ಕೊಟ್ರ್ಪ ಸೋಗಿ ಸೇರಿದಂತೆ ಡಾ ಶ್ರದ್ಧಾ ಭರತ್. ಭರತ್ ಡಿ, ಪೂಜ ಭರತ್, ಅಮೃತಾ ಸಂತೋಷ್, ಜಯಲಕ್ಷ್ಮಿ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಸ್ವಾತಿ(ಆರೋಗ್ಯ ಇಲಾಖೆ), ಮದ್ದಾನಪ್ಪ ಪ್ರಿನ್ಸಿಪಾಲ್, ವಿನೂತನ ಮಹಿಳಾ ಪದವಿ ಕಾಲೇಜು, ಮನೋಜ್ ದಾನಪ್ಪ, ವೆಂಕಟಸಪ್ತಗಿರಿ, ಸಿದ್ದರಾಮೇಶ್, ಮಾನಸ, ಸೋಹಲ್, ಚಿನ್ನ, ವಿಷ್ಣು ಸೇರಿದಂತೆ ಇತರರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 