ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ನಮನ

ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ನಮನ  Tribute to martyred soldiers on the occasion of Kargil Vijay Diwas

ಲೋಕದರ್ಶನ ವರದಿ 

ಧಾರವಾಡ 26: ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಜೆಎಸ್‌ಎಸ್ ಪಬ್ಲಿಕ್ ಶಾಲೆ ಹಾಗೂ ಜೆಎಸ್‌ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಭಾನುವಾರ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ​‍್ಿಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪವಿರುವ ಹುತಾತ್ಮ ಯೋಧರ ಸ್ಮಾರಕಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಎಸ್‌ಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ದೇಶಕ್ಕಾಗಿ ಯೋಧರು ಮಾಡಿದ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ, ರಾಷ್ಟ್ರಸೇವೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಬಳಿಕ ಸಪ್ತಾಪುರದಿಂದ ಶಿವಾಲಯದವರೆಗೆ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೇಶಭಕ್ತಿ ಘೋಷಣೆಗಳೊಂದಿಗೆ ಪಾದಯಾತ್ರೆ ನಡೆಸಿ ಹುತಾತ್ಮ ಯೋಧರ ಆತ್ಮಕ್ಕೆ ನಮನ ಸಲ್ಲಿಸಿದರು.