ನೂತನ ನಿರ್ದೇಶಕ ಮಲ್ಲನಗೌಡ ಬಿರಾದಾರಗೆ ಸನ್ಮಾನ
Tribute to new director Mallana Gowda Birada
ನೂತನ ನಿರ್ದೇಶಕ ಮಲ್ಲನಗೌಡ ಬಿರಾದಾರಗೆ ಸನ್ಮಾನ
ತಾಳಿಕೋಟಿ 14: ಮುದ್ದೇಬಿಹಾಳ ತಾಲೂಕ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕೊಡಗಾನೂರ ಗ್ರಾಮದ ಮಲ್ಲನಗೌಡ ನಿಂಗನಗೌಡ ಬಿರಾದಾರ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಗೆಳೆಯರ ಬಳಗದ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲನಗೌಡ ಬಿರಾದಾರ ಅವರು ಎಲ್ಲರ ಸಹಕಾರದೊಂದಿಗೆ ನಾನು ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ನನಗೆ ಬೆಂಬಲಿಸಿದ ಎಲ್ಲರನ್ನು ಹಾಗೂ ಪ್ರೀತಿಯಿಂದ ನನ್ನನ್ನು ಸನ್ಮಾನಿಸಿದ ನಿಮ್ಮನ್ನು ಅಭಿನಂದಿಸುತ್ತೇನೆ ಎಂದರು. ಈ ಸಮಯದಲ್ಲಿ ಮಿತ್ರ ಬಳಗದವರಾದ ಶಂಕರಗೌಡ ಕಂತಲಗಾಂವಿ, ಸಂಗನಗೌಡ ಹೆಗರೆಡ್ಡಿ, ಪ್ರಭುಗೌಡ ನಾಡಗೌಡ, ಸಂಗನಗೌಡ ಅಸ್ಕಿ, ಬಸನಗೌಡ ನಾಡಗೌಡ ಮಲ್ಲನಗೌಡ ಬಿರಾದಾರ ಶಾಂತಗೌಡ ಬಿರಾದಾರ, ಮಲ್ಲನಗೌಡ ಯಾದಗಿರಿ, ಬಸನಗೌಡ ನಾಡಗೌಡ, ಪ್ರವೀಣ ರೆಡ್ಡಿ, ಎಚ್.ಬಿ.ಬಿರಾದಾರ,ಅಪ್ಪು ಆನೇಸೂರ, ತಿಪ್ಪಣ್ಣ ಅದೋನಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 