ಪ್ರಾಮಾಣಿಕವಾಗಿ ಸೇವೆ ಸಂಚಾರಿ ನಿಯಂತ್ರಣಾಧಿಕಾರಿ ನಿವೃತ್ತಿ ವಿಪ್ರದ ತಿಮ್ಮಪ್ಪಗೆ ಸನ್ಮಾನ
Tribute to retired traffic controller Viprada Thimmappa for his honest service
ಕಂಪ್ಲಿ 01: ಸಾರಿಗೆ ಇಲಾಖೆಯಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಯಾಗಿ ವಿಪ್ರದ ತಿಮ್ಮಪ್ಪ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದಾರೆ ಎಂದು ಸಮಾಜ ಸೇವಕ ಜಡೇ ಮಹಾದೇವಪ್ಪ ಹೇಳಿದರು. ಕುರುಗೋಡು ಪಟ್ಟಣದ ಸಾರಿಗೆ ಡಿಪೋದಲ್ಲಿ ಬುಧವಾರ ಆಯೋಜಿಸಿದ್ದ ಬೀಳ್ಕೊಡಿಗೆ ಸಮಾರಂಭದಲ್ಲಿ ನಿವೃತ್ತ ಸಂಚಾರಿ ನಿಯಂತ್ರಣಾಧಿಕಾರಿ ವಿಪ್ರದ ತಿಮ್ಮಪ್ಪ ಭಾಗ್ಯವತಿ(ಚಾಮುಂಡಿ) ದಂಪತಿ ಇವರಿಗೆ ಸನ್ಮಾನಿಸಿ ಗೌರವಿಸಿದ ನಂತರ ಮಾತನಾಡಿ, ಸರ್ಕಾರಿ ಕೆಲಸ ದೇವರ ಕೆಲಸ ಎಂಬಂತೆ ಸತತ 34 ವರ್ಷ ಸಾರಿಗೆ ಇಲಾಖೆಯಲ್ಲಿ ಶ್ರದ್ದೆ, ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಯಾವುದೇ ಕಪ್ಪುಚಿಕ್ಕೆ ಇಲ್ಲದೇ ಸೇವೆ ಸಲ್ಲಿಸಿದ್ದಾರೆ. ಸರ್ಕಾರಿ ಸೇವೆಯಲ್ಲಿ ವಯೋ ನಿವೃತ್ತಿ ಸಾಮಾನ್ಯ. ಆದ್ದರಿಂದ ಈಗ ನಿವೃತ್ತಿ ಹೊಂದಿ ವಯೋ ಜೀವನಕ್ಕೆ ನಾಂದಿ ಹಾಡಿದ್ದಾರೆ.
ಈ ನಿವೃತ್ತ ಬದುಕು ಸುಖ, ಸಮೃದ್ಧ, ಸಂತಸದಿಂದ ಕೂಡಿರಲಿ ಎಂದರು.ಸನ್ಮಾನ ಸ್ವೀಕರಿಸಿ ನಿವೃತ್ತ ಸಂಚಾರಿ ನಿಯಂತ್ರಣಾಧಿಕಾರಿ ವಿಪ್ರದ ತಿಮ್ಮಪ್ಪ ಮಾತನಾಡಿ, 1992ರಲ್ಲಿ ಕೂಡ್ಲಿಗಿಯಲ್ಲಿ ಕಂಡಕ್ಟರ್ ಆಗಿ ಕೆಲಸ ಆರಂಭಿಸಿ, ನಂತರ ಹೊಸಪೇಟೆ, ಕುಷ್ಟಗಿ, ಯಲಬುರ್ಗಾ, ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಕಂಪ್ಲಿಯಲ್ಲಿ ಸಂಚಾರಿ ನಿಯಂತ್ರಣಾಧಿಕಾರಿಯಾಗಿ ಸತತ ಐದು ವರ್ಷ ಸೇವೆ ಸಲ್ಲಿಸಿರುವೆ. ಇನ್ನಷ್ಟು ದಿನ ಸೇವೆ ಸಲ್ಲಿಸುತ್ತೇವೆ ಅಂದರೂ ಸೇವೆಗೆ ಅವಕಾಶ ಇಲ್ಲ. ಹೊಸದಾಗಿ ಬರುವವರಿಗೆ ಅವಕಾಶ ಮಾಡಿಕೊಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಬ್ಬರ ಸಹಕಾರದಿಂದ ಇಷ್ಟುದಿನ ಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದರು.ನಂತರ ನಿವೃತ್ತಿ ಹೊಂದಿದ ತಿಮ್ಮಪ್ಪಗೆ ಅದ್ಧೂರಿಯಾಗಿ ಸನ್ಮಾನಿಸಿ ಬೀಳ್ಕೊಟ್ಟರು.ಈ ಸಂದರ್ಭದಲ್ಲಿ ಡಿಪೋ ವ್ಯವಸ್ಥಾಪಕ ತಿರುಮಲೇಶ, ನಿವೃತ್ತ ಆರ್ ಟಿಒ ವೆಂಕಟೇಶರಾವ್, ಸಂಚಾರಿ ನಿಯಂತ್ರಣಾಧಿಕಾರಿಯಾದ ಹೊಸಪೇಟೆ ವಾಸಪ್ಪ, ದೇವರೆಡ್ಡಿ, ಮುಖಂಸರಾದ ವಿಪ್ರದ ಭೀಮೇಶ, ಬಳ್ಳಾರಿ ಮಾಧವ, ಮಾರೇಶ ಪಟ್ಟಣಸೆರಗು, ಹುಸೇನಪ್ಪ, ರಾಮಚಂದ್ರ್ಪ ಸೇರಿದಂತೆ ಸಾರಿಗೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 