ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ: ಶಿವಸೇನೆ ಟೀಕೆ
ಮುಂಬೈ, ಫೆ 06, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಈ ವಿಷಯದ ಬಗ್ಗೆ ಶಿವಸೇನೆ ಬಿಜೆಪಿಯನ್ನು ಟೀಕಿಸಿದೆ “ರಾಮಮಂದಿರ ಟ್ರಸ್ಟ್ ವಿಷಯವನ್ನು ರಾಜಕೀಯಗೊಳಿಸಲಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಆದರೆ ಅದರ "ಅಡಿಪಾಯ" ವನ್ನು ದೆಹಲಿ ಚುನಾವಣೆಯಲ್ಲಿ ಇಡಲಾಗಿದೆ” ಎಂದು ಶಿವಸೇನಾ ಮುಖವಾಣಿ ಸಾಮ್ನಾ ಆಕ್ಷೇಪಿಸಿದೆ.ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯವನ್ನು ನಿರ್ಮಿಸಲು 15 ಸದಸ್ಯರ ಸ್ವಾಯತ್ತ ಟ್ರಸ್ಟ್ ರಚಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದರು. ''ದೆಹಲಿ ವಿಧಾನಸಭೆಯ ಮತದಾನಕ್ಕೆ ಕೇವಲ ನಾಲ್ಕು ದಿನಗಳ ಮುನ್ನ 'ಜೈ ಶ್ರೀ ರಾಮ್' ಘೋಷಣೆಯಾಗಿದು ಶ್ರೀ ರಾಮನ ಸಹಾಯದಿಂದ ಬಿಜೆಪಿ ಗೆಲುವಿನ ಸ್ಥಾನಳು ಎರಡು ಅಥವಾ ನಾಲ್ಕು ಏರಿದರೆ ಸಂತೋಷವಾಗುತ್ತದೆ ”ಎಂದು ಶಿವಸೇನೆಯ ಮುಖವಾಣಿ 'ಸಾಮನಾ' ಸಂಪಾದಕೀಯದಲ್ಲಿ ತಿಳಿಸಲಾಗಿದೆ. ರಾಮ್ ದೇವಾಲಯದ ವಿಷಯವನ್ನು ರಾಜಕೀಯಗೊಳಿಸಲಾಗುವುದಿಲ್ಲ ಎಂದು ನಿರೀಕ್ಷಿಸಲಾಗಿತ್ತು, ಆದರೆ ದೆಹಲಿ ವಿಧಾನಸಭಾ ಚುನಾವಣೆಗೆ ಅದರ 'ಅಡಿಪಾಯ' ಹಾಕಲಾಗುತ್ತಿದ್ದು, 2024 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ಣಗೊಳ್ಳಲಿದೆ. ಆ ಹೊತ್ತಿಗೆ ದೇಶದಲ್ಲಿ "ರಾಮ ರಾಜ್ಯ" (ಕಲ್ಯಾಣ ರಾಜ್ಯ) ನಿಜವಾದ ಅರ್ಥದಲ್ಲಿ ಸಾಕಾರಗೊಳ್ಳುವ ನಿರೀಕ್ಷೆಯಿದೆ, "ಎಂದು ಮುಖವಾಣಿಯಲ್ಲಿ ಸೇರಿಸಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 