ಕ್ಷಯರೋಗ ಪೌಷ್ಟಿಕ ಆಹಾರ ಬುಟ್ಟಿ ವಿತರಣೆ
Tuberculosis nutritional food basket distribution
ಮುಂಡಗೋಡ: ಪಟ್ಟಣದ ತಾಲ್ಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ಭವಿಷ್ಯ ಭಾರತ ಸಂಸ್ಥೆ ಹಾಗೂ ಎಲ್ಟಿಐ ಮೈಂಡ್ ಟೀ ಫೌಂಡೇಶನ್ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ಪೌಷ್ಟಿಕ ಆಹಾರ ಬುಟ್ಟಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕ್ಷಯ ರೋಗಕ್ಕೆ ಉತ್ತಮ ಆಹಾರ ಪದ್ದತಿ ಕೂಡ ಮುಖ್ಯವಾಗುತ್ತದೆ.ಕ್ಷಯ ರೋಗಿಗಳಿಗೆ ಸಮರ್ಕವಾದ ಪೌಷ್ಟಿಕಾಂಷ ಲಭ್ಯವಾದಲ್ಲಿ ಖಾಯಿಲೆ ಶೀಘ್ರವಾಗಿ ಹತೋಟಿಗೆ ಬಂದು ರೋಗಿಗಳು ಗುಣಮುಖರಾಗುತ್ತಾರೆ.ಹಾಗಾಗಿ ಹೆಚ್ಚೆಚ್ಚು ಪೌಷ್ಟಿಕ ಆಹಾರ ಪಡೆದುಕೊಳ್ಳುವುದು ಅತಿ ಮುಖ್ಯ ಎಂದು ತಾಲೂಕಾ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸ್ವರೂಪರಾಣಿ ಪಾಟೀಲ ಹೇಳಿದರು.
ಮುಂಡಗೋಡ ಭವಿಷ್ಯ ಭಾರತ ಸಂಸ್ಥೆ ಯ ಡಾ.ಸಚಿನ ಕೊಟಗುಣಸಿ ಮಾತನಾಡಿ, ಆರೋಗ್ಯ ಮತ್ತು ಪೌಷ್ಟಿಕತೆಯ ವಿಚಾರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆ ಹಮ್ಮಿಕೊಂಡಿದ್ದು, ಅದರಲ್ಲಿ ಇದು ಕೂಡ ಒಂದಾಗಿದೆ.ನಮ್ಮ ಕಾರ್ಯಕ್ರಮಗಳಿಗೆ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತಿದ್ದಾರೆ.ಹಿರಿಯ ಮೇಲ್ವಿಚಾರಕರಾದ ಜೆ. ಲಕ್ಷ್ಮಣ ಣ ಮಾತನಾಡಿದರು.ಈ ವೇಳೆ ಕೆಲವು ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಬುಟ್ಟಿಯನ್ನು ವಿತರಣೆ ಮಾಡಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 