ಅಕ್ರಮ ಮರಳು ದಂಧೆಗೆ ನಲುಗಿದ ತುಂಗಭದ್ರಾ ನದಿ ಒಡಲು
Tungabhadra river, devastated by illegal sand mining
ಹೂವಿನಹಡಗಲಿ 08: ತಾಲೂಕಿನಜೀವಾಳವಾಗಿರುವ ತುಂಗಭದ್ರಾ ಬಲ ದಂಡೆಯ ನದಿ ತೀರದಲ್ಲಿಕಬ್ಬಿಣದ ತೆಪ್ಪಗಳ ಮೂಲಕ ಅಕ್ರಮ ಮರಳು ದಂಧೆ ನಿರಂತರವಾಗಿ ನಡೆಯುತ್ತಿದೆ. ಮರಳು ನೀತಿ ಜಾರಿಗೊಳಿಸುವಲ್ಲಿ ತೋರಿರುವ ನಿರ್ಲಕ್ಷ್ಯದ ಫಲವಾಗಿ ಸರಕಾರಕ್ಕೆ ಲಕ್ಷಾಂತರ ರೂ. ಮೌಲ್ಯದ ರಾಜಧನ ನಷ್ಟವಾಗುತ್ತಿದೆ. ಅಲ್ಲದೇ, ಅವೈಜ್ಞಾನಿಕವಾಗಿ ನಡೆಯುತ್ತಿರುವ ಮರಳು ಗಣಿಗಾರಿಕೆಯಿಂದ ಪರಿಸರ, ಅಂತರ್ಜಲದ ಮೇಲೂ ದುಷ್ಪರಿಣಾಮ ಬೀರುವ ಆತಂಕ ಮನೆ ಮಾಡಿದೆ.
ತಾಲೂಕಿನ ಬಲ ದಂಡೆಯ ತುಂಗಭದ್ರಾ ನದಿ ತೀರದ ಮದಲಗಟ್ಟಿ, ಬನ್ನಿಮಟ್ಟಿ, ನಂದಿಗಾವಿ, ಮೈಲಾರ, ಕುರುವತ್ತಿ, ಲಿಂಗನಾಯ್ಕನಹಳ್ಳಿ ಹಾಗೂ ಹಾವೇರಿ ಜಿಲ್ಲೆಯ ಎಡ ದಂಡೆಯ ನದಿ ತೀರದ ಹಾವನೂರು,ಗಳಗನಾಥ ,ಮೇವುಂಡಿ ಭಾಗದಲ್ಲಿ ಬಿಹಾರದ ಕಾರ್ಮಿಕರು ಕಬ್ಬಿಣದ ತೆಪ್ಪಗಳ ಮೂಲಕ ಹಾವೇರಿ ಜಿಲ್ಲೆ ಗೆ ನಿರಂತರ ಅಕ್ರಮ ಮರಳು ಸಾಗಣೆ ನಡೆಯುತ್ತದೆ. ಈಗಾಗಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರಂತರವಾಗಿ ಹಲವು ಕಡೆಗಳಲ್ಲಿ ಅಕ್ರಮ ಮರಳು ದಂಧೆಕೋರರು ವಿರುದ್ಧ ದಾಳಿ ಮಾಡಿ ಕೇಸ್ ದಾಖಲು ಮಾಡಿದ್ದಾರೆ. ಆದರೂ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದೆ.
ಮನೆ, ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಮರಳು ಸಿಗುತ್ತಿಲ್ಲ. ಒಂದು ಗಾಡಿಗೆ ಕನಿಷ್ಠ ರೂ. 28 ರಿಂದ ರೂ. 30 ಸಾವಿರಕ್ಕೆ ಅಕ್ರಮವಾಗಿ ರಾತ್ರಿ ಸಮಯದಲ್ಲಿ ತಂದು ಹಾಕುತ್ತಾರೆ ಇದಕ್ಕೆ ಕಡಿವಾಣ ಇಲ್ಲ. ಬಡವರಿಗೆ ಮರಳು ಸಿಗುತ್ತಿಲ್ಲ .ಮನೆ ನಿರ್ಮಾಣ ವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ ಎನ್ನಲಾಗಿದೆ. ಕೆಲ ಕಾರಣಗಳಿಂದ ಬ್ಲಾಕ್ ಟೆಂಡರ್ ವಿಳಂಬ ನೀತಿಯಿಂದ ಮರಳು ದಂಧೆಕೋರರಿಗೆ ಲೂಟಿ ಮಾಡಲು ಅನುಕೂಲವಾಗಿದೆ. ಸರ್ಕಾರಕ್ಕೆ ಲಕ್ಷಾಂತದ ರೂ. ನಷ್ಟವಾಗುತ್ತಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 