ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಪೀಡಿತರು ಗುಣಮುಖ-ಆಸ್ಪತ್ರೆಯಿಂದ ಬಿಡುಗಡೆ
ಧಾರವಾಡ ಮೇ.20, ಕೋವಿಡ್-19 ವೈರಸ್ ನಿಂದ ಗುಣಮುಖರಾಗಿರುವ ಇಬ್ಬರು ವ್ಯಕ್ತಿಗಳನ್ನು ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ ಪೀಡಿತ-430 (30 ವರ್ಷ, ಮಹಿಳೆ) ಹಾಗೂ ಆಝಾದ್ ಕಾಲನಿಯ ಪೀಡಿತ-431( 13 ವರ್ಷ,ಬಾಲಕಿ) ಇಬ್ಬರು ಸಂಪೂರ್ಣ ಗುಣಮುಖರಾಗಿದ್ದಾರೆ.24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 09 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯ ಜಿಲ್ಲೆಯ 17 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 