ನಾಳೆಯಿಂದ ನಾಂದೇಡ್ ಎಕ್ಸ್ಪ್ರೆಸ್ನಲ್ಲಿ ಎರಡು ಸಾಮಾನ್ಯ ದರ್ಜೆ ಹೆಚ್ಚುವರಿ ಬೋಗಿ
ರಾಯಚೂರು, ಜ 29 ಜನಸಾಮಾನ್ಯರ ಸಂಚಾರ ಒತ್ತಡ ತಗ್ಗಿಸಲು ರಾಯಚೂರು ಮಾರ್ಗವಾಗಿ ನಾಂದೇಡ್ನಿಂದ ಬೆಂಗಳೂರಿಗೆ ಸಂಚರಿಸುವ ನಾಂದೇಡ್ ಎಕ್ಸ್ಪ್ರೆಸ್ನಲ್ಲಿ ಎರಡು ಸಾಮಾನ್ಯ ದರ್ಜೆಯ ಹೆಚ್ಚುವರಿ ಬೋಗಿಗಳು ಜೋಡಿಸಲು ದಕ್ಷಿಣ - ಪಶ್ಚಿಮ ರೈಲ್ವೆ ವಲಯ ನಿರ್ಧರಿಸಿದೆ. ಪ್ರತಿನಿತ್ಯ ಕಲ್ಯಾಣ ಕರ್ನಾಟಕ ಭಾಗದಿಂದ ಬಡ ಜನತೆ, ಕೂಲಿಕಾರರು ಬೆಂಗಳೂರಿಗೆ ತೆರಳುತ್ತಿದ್ದು ಸಂಚಾರಕ್ಕೆ ತೊಂದರೆ ನಿವಾರಿಸಲು ರೈಲ್ವೇ ಸಲಹಾ ಸಮಿತಿ ಸದಸ್ಯರ ಬೇಡಿಕೆ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುಂತಕಲ್ ವಿಭಾಗೀಯ ಮಹಾ ಪ್ರಬಂಧಕ ಅಲೋಕ ತಿವಾರಿ ಆಸಕ್ತಿ ಮೇರೆಗೆ ಹೆಚ್ಚುವರಿಯಾಗಿ ಎರಡು ಸಾಮಾನ್ಯ ಬೋಗಿಗಳು ನಾಂದೇಡ್ ಎಕ್ಸ್ಪ್ರೆಸ್ಗೆ ಜೋಡಿಸಲು ನಿರ್ಧರಿಸಲಾಗಿದೆ. ಜನವರಿ 30 ರಿಂದ ನಾಂದೇಡ್ನಿಂದ ಬೆಂಗಳೂರಿಗೆ ತೆರಳುವ ರೈಲು ಸಂಖ್ಯೆ ೧೬೫೯೩ ಮತ್ತು ಬೆಂಗಳೂರಿನಿಂದ ನಾಂದೇಡ್ಗೆ ತೆರಳುವ ರೈಲು ಸಂಖ್ಯೆ ೧೬೫೯೪ ರಲ್ಲಿ ಈ ಸೇವೆ ಲಭ್ಯವಾಗಲಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 