ಕಾರವಾರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
Two tourists rescued from drowning in Karwar
ಕಾರವಾರ 14 : ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ ಘಟನೆ ಇಲ್ಲಿನ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ರವೀಂದ್ರನಾಥ್ ಕಡಲ ತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದಿದ್ದರು. ಮಳೆಗಾಲ ಸಮೀಪಿಸುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಮತ್ತು ವೇಗ ಹೆಚ್ಚುತ್ತದೆ ಎಂಬುದನ್ನು ಅರಿಯದೆ ಪ್ರವಾಸಿಗರು ಕಡಲಿಗೆ ಮೋಜಿಗಾಗಿ ಇಳಿದಿದ್ದರು .
ಪರಿಣಾಮ ಅಲೆಗಳ ಅಬ್ಬರಕ್ಕೆ ಪ್ರವಾಸಿಗರು ಸಿಲುಕಿದರು. ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಸ್ಥಳೀಯ ಯುವಕರು ಸಮುದ್ರಕ್ಕೆ ಧುಮುಕಿ ಮುಳುಗುತ್ತಿದ್ದ ಓರ್ವಯುವಕ ಹಾಗೂ ಒಬ್ಬ ಬಾಲಕನನ್ನು ರಕ್ಷಣೆ ಮಾಡಿದರು. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್, ಅಜಯ್ ಎಂಬ ಯುವಕರು ಜೀವದ ಹಂಗು ತೊರೆದು ಪ್ರವಾಸಿಗರನ್ನು ರಕ್ಷಣೆ ಮಾಡಿದರು. ಕಡಲ ತೀರದಲ್ಲಿ ಸಮುದ್ರಕ್ಕೆ ಮಳೆಗಾಲ ಸಮೀಪಿಸುವ ಮುನ್ನ ಇಳಿಯಬಾರದು ಎಂದು ಪ್ರವಾಸಿಗರಿಗೆ ಸೂಚಿಸಿದರು. ಪ್ರಾಣ ಉಳಿದ ಕ್ಷಣ ನೆನೆದು ಇತರೆ ಪ್ರವಾಸಿಗರು ನಿಟ್ಟುಸಿರು ಬಿಟ್ಟರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 