ಶಿವಸೇನೆ ಆಡಳಿತಕ್ಕೆ 100 ದಿನ : ನಾಳೆ ಅಯೋಧ್ಯೆಗೆ ಉದ್ಧವ್ ಠಾಕ್ರೆ ಭೇಟಿ
ಅಯೋಧ್ಯಾ, ಮಾ 06, ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಉದ್ಧವ್ ಠಾಕ್ರೆ ಶತದಿನದ ಸಂಭ್ರಮ ಆಚರಿಸಲು ನಾಳೆ ಅಯೋಧ್ಯೆಗೆ ತೆರಳುತ್ತಿದ್ದಾರೆ. ರಾಮಜನ್ಮಭೂವಿಯಲ್ಲಿ ಶ್ರೀರಾಮ ದೇಗುಲಹಾಗೂ ಹನುಮಗಡ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲು ಉದ್ಧವ್ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರು ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಪತ್ನಿ, ಮಗ, ಪಕ್ಷದ ಮುಖಂಡರು ಹಾಗೂ ಸಚಿವರ ಸಮೇತ ಅಯೋಧ್ಯೆಗೆ ತೆರಳಿ ಶ್ರೀರಾಮನ ಆಶೀರ್ವಾದ ಪಡೆಯಲಿದ್ದಾರೆ. ಅಲ್ಲದೆ ಮಹಾರಾಷ್ಟ್ರಕ್ಕೆ ಹಿಂದಿರುಗುವ ಮುನ್ನ ಸಂಜೆ ಸರಯೂ ಆರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶಿವಸೇನೆಯ ನೂರಾರು ಕಾರ್ಯಕರ್ತರು ವಿಶೇಷ ರೈಲಿನ 18 ಬೋಗಿಗಳಲ್ಲಿ ಶುಕ್ರವಾರವೇ ಅಯೋಧ್ಯೆಯತ್ತ ಪ್ರಯಾಣ ಹೊರಟಿದ್ದಾರೆ. ಉದ್ಧವ್ ಠಾಕ್ರೆಯವರು 2019 ನವೆಂಬರ್ 28ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 