ಕೊರೊನಾ ನಿಗ್ರಹಿಸಲು ಕರ್ನಾಟಕ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮಗಳಿಗೆ ಬ್ರಿಟನ್ ಕಾನೂನು ಸಚಿವರ ಪ್ರಶಂಸೆ
ಬೆಂಗಳೂರು, ಏ 27, ಕೊರೊನಾ ಸಾಂಕ್ರಾಮಿಕ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬ್ರಿಟನ್ ಕಾನೂನು ಸಚಿವ ರಾಬರ್ಟ್ ಬಕ್ ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭಾನುವಾರ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲು ತಮ್ಮ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ರಿಟನ್ ಕಾನೂನು ಸಚಿವರಿಗೆ ವಿವರಿಸಿದ್ದರು ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ನಿರ್ಬಂಧಗಳನ್ನು ಕೆಲವು ಕಡೆ ನಿಧಾನವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಬ್ರಿಟನ್ ನಲ್ಲಿ ನೆಲೆಸಿರುವ ಕನ್ನಡಿಗ ಶರವಣ ಗುರುಮೂರ್ತಿ, ಬ್ಯಾಂಕ್ ಗಳಿಂದ ಭಾರಿ ಪ್ರಮಾಣದ ಸಾಲ ಪಡೆದು ಬ್ರಿಟನ್ ನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕು ಎಂದು ವಿಡಿಯೋ ಕಾನ್ಫರೆನ್ಸ್ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಬ್ಯಾಂಕುಗಳೊಂದಿಗೆ ಈ ಸಂಬಂಧ ಸಭೆ ನಡೆಸಿ ವಿದ್ಯಾರ್ಥಿಗಳು ಪಾವತಿಸಬೇಕಾಗಿರುವ ಇಎಂಐ ಮರು ನಿಗದಿ ಸಾಧ್ಯವೇ ಎಂಬ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಲು ಯತ್ನಿಸುವ ಭರವಸೆ ನೀಡಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 