ಲಿಂಗೈಕ ಮಹಾದೇವತಾತನವರ ಉಚ್ಛಾಯ ಉತ್ಸವ
Uchchaya Utsava of Lingaika Mahadevattava
ಲಿಂಗೈಕ ಮಹಾದೇವತಾತನವರ ಉಚ್ಛಾಯ ಉತ್ಸವ
ಕಂಪ್ಲಿ: 19. ತಾಲ್ಲೂಕಿನ ಮೆಟ್ರಿ ಗ್ರಾಮದ ವಿಶ್ವಾರಾಧ್ಯ ಗುರುಕುಲ ಮಠದ ಪ್ರಣವಜ್ಯೋತಿ ಮಹಾಕ್ಷೇತ್ರ ಸಂಸ್ಥಾಪಕ ಲಿಂಗೈಕ್ಯ ಹಂದ್ಯಾಳು ಮಠದ ಮಹಾದೇವತಾತನವರ 41ನೇ ಪುಣ್ಮಸ್ಮರಣೆ ಬುಧವಾರ ವೈಭವದಿಂದ ಜರುಗಿತು. ಪುಣ್ಯಸ್ಮರಣೆ ಅಂಗವಾಗಿ ಶ್ರೀಮಠದಲ್ಲಿ ಗೌರಮ್ಮನವರ, ಶ್ರೀತಾತನವರ ಕರ್ತೃ ಗದ್ದುಗೆ, ಪ್ರಣವಜ್ಯೋತಿ ಪಂಚಪೀಠಾಧೀಶ್ವರರ ವಿಗ್ರಹಗಳಿಗೆ ವಿಶೇಷ ರುದ್ರಾಭಿಷೇಕ, ಬಿಲ್ವಾರ್ಚನೆ ನಂತರ ಗಣಾರಾಧನೆ ನಡೆಯಿತು. ಗ್ರಾಮದಲ್ಲಿ ಶ್ರೀತಾತನವರ ಉಚ್ಛಾಯ ಶ್ರೀಮಠದಿಂದ ಬಸವಣ್ಣನಪೇಟೆ ಎದುರು ಬಸವಣ್ಣ ಕಟ್ಟೆಯವರೆಗೆ ಭಕ್ತರ ಜಯಘೋಷದೊಂದಿಗೆ ತೆರಳಿ ಮತ್ತೆ ಸ್ವಸ್ಥಾನಕ್ಕೆ ಮರಳಿತು. ಮಂಗಳವಾದ್ಯ, ಸಮ್ಮಾಳ ಮೇಳ ತಂಡದವರು ಭಾಗವಹಿಸಿದ್ದರು. ನಂತರ ಭಕ್ತರಿಂದ ಕಾರ್ತಿಕ ದೀಪೋತ್ಸವ ಜರುಗಿತು. ಪುಣ್ಯಸ್ಮರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯರ ಪುರಾಣ ಪ್ರವಚನ ಮಹಾಮಂಲಗೊಂಡಿತು. ಎಚ್.ಎಂ. ವಿಶ್ವೇಶ್ವರಯ್ಯ ಸ್ವಾಮೀಜಿ ಪುರಾಣ ಪ್ರವಚನ, ಎ.ಎಂ. ಸೋಮಶೇಖರಯ್ಯಸ್ವಾಮಿ ಹಾರೋ್ಮನಿಯಂಗೆ ಸಿ.ಡಿ. ಮೌನೇಶ್ ತಬಲಾಸಾಥ್ ನೀಡಿದರು. ಮೆಟ್ರಿ ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಹಳ್ಳಿಗಳ ಭಕ್ತರು ಭಾಗವಹಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 