ಬೆಳೆ ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆ
Unable to repay crop loan, farmer commits suicide
ಸಿಂದಗಿ 18: ಬೆಳೆ ಸಾಲ ಮಾಡಿದ್ದ ರೈತ ಅದನ್ನು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುರುಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ನಡೆದಿದೆ.
ರುದ್ರ್ಪ ಬಸಪ್ಪ ಜೇವರ್ಗಿ(40) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳೆಗಳಿಗೆ ಸಂಪಡಿಸುವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ತಾಲೂಕಿನ ಮುರುಡಿ ಗ್ರಾಮದ ಸರ್ವೇ ನಂಬರ್ 121/1ರಲ್ಲಿ 5.18 ಎಕರೆ ಜಮೀನಿದೆ. ಸುಂಗಠಾಣದ ಪಿಕೆಪಿಎಸ್ ಬ್ಯಾಂಕ್ ನಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಈ ಜಮೀನು ಮೇಲೆ ಪಡೆಯಲಾಗಿದೆ. ಇನ್ನೊಂದು 104/4*1ರಲ್ಲಿ 3.21 ಎಕರೆ ಜಮೀನು ಇದೆ. ಸಿದ್ದೇಶ್ವರ ಪತ್ತಿನ ಬ್ಯಾಂಕಿನಲ್ಲಿ 8 ಲಕ್ಷ ರೂಪಾಯಿ ಸಾಲವಿದೆ. ಇವುಗಳನ್ನು ತೀರಿಸಲಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರಂತೆ.
ಸಾಲಬಾಧೆಗೆ ಬೆಸತ್ತು ರುದ್ರ್ಪ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಗೆ ಬಂದ ಮಗ ಇದನ್ನು ನೋಡಿ ನೆರೆ ಮನೆಯವರ ಸಹಾಯದಿಂದ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ಸಂಜೆ ಸುಮಾರು 5.25ರ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂದಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 