ಬೆಳೆ ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆ

ಬೆಳೆ ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆ  Unable to repay crop loan, farmer commits suicide

ಸಿಂದಗಿ  18: ಬೆಳೆ ಸಾಲ ಮಾಡಿದ್ದ ರೈತ ಅದನ್ನು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುರುಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ನಡೆದಿದೆ.  

ರುದ್ರ​‍್ಪ ಬಸಪ್ಪ ಜೇವರ್ಗಿ(40) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳೆಗಳಿಗೆ ಸಂಪಡಿಸುವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.  

ತಾಲೂಕಿನ ಮುರುಡಿ ಗ್ರಾಮದ ಸರ್ವೇ ನಂಬರ್ 121/1ರಲ್ಲಿ 5.18 ಎಕರೆ ಜಮೀನಿದೆ. ಸುಂಗಠಾಣದ ಪಿಕೆಪಿಎಸ್ ಬ್ಯಾಂಕ್ ನಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಈ ಜಮೀನು ಮೇಲೆ ಪಡೆಯಲಾಗಿದೆ. ಇನ್ನೊಂದು 104/4*1ರಲ್ಲಿ 3.21 ಎಕರೆ ಜಮೀನು ಇದೆ. ಸಿದ್ದೇಶ್ವರ ಪತ್ತಿನ ಬ್ಯಾಂಕಿನಲ್ಲಿ 8 ಲಕ್ಷ ರೂಪಾಯಿ ಸಾಲವಿದೆ. ಇವುಗಳನ್ನು ತೀರಿಸಲಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರಂತೆ. 

ಸಾಲಬಾಧೆಗೆ ಬೆಸತ್ತು ರುದ್ರ​‍್ಪ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಗೆ ಬಂದ ಮಗ ಇದನ್ನು ನೋಡಿ ನೆರೆ ಮನೆಯವರ ಸಹಾಯದಿಂದ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ಸಂಜೆ ಸುಮಾರು 5.25ರ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂದಗಿ ಠಾಣೆಯಲ್ಲಿ ದೂರು ದಾಖಲಾಗಿದೆ.