ಜಮೆ ಆಗದ ಮಾಶಾಸನ: ಬಿಡುಗಡೆಗೆ ಆಗ್ರಹ
Uncollected monthly salary: Demand for release
ಕೊಲ್ಹಾರ 24: ರಾಜ್ಯದ ಎಲ್ಲಾ ವಿಕಲಚೇತನರ ಪ್ರತಿ ತಿಂಗಳ ಮಾಶಾಸನ ಕಳೆದ 2-3 ತಿಂಗಳಿಂದ ಜಮೆಯಾಗದೆ ವಿಕಲಚೇತನರು ಹಾಗೂ ವಯೋವೃದ್ಧರು ತೊಂದರೆ ಎದುರಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ಮಾಶಾಸನ ಬಿಡುಗಡೆ ಮಾಡಬೇಕು ಎಂದು ಕೊಲ್ಹಾರ ತಾಲೂಕಿನ ವಿಶೇಷ ಚೇತನರ ಸಂಘದ ಕಾರ್ಯದರ್ಶಿ ಗುಲಾಬ ಮ. ಶಿರೂರು ತಿಳಿಸಿದ್ದಾರೆ. ಆರೋಗ್ಯದ ಚಿಕಿತ್ಸೆ ಪಡೆಯಲು ಓಷಧಿಗಳನ್ನು ಖರೀದಿಸಲು, ನಿತ್ಯದ ಹಾಲು, ರೇಷನ್ ಸಾಮಗ್ರಿಗಳು ಖರೀದಿಸಲು ಮತ್ತು ಮನೆ ಬಾಡಿಗೆ ಕಟ್ಟಲು ಹಣ ಇಲ್ಲದೆ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ವಿಕಲಚೇತನರ ಕಡೆ ಗಮನ ಹರಿಸಿ ಆದಷ್ಟು ಬೇಗ ರಾಜ್ಯದ ಎಲ್ಲಾ ವಿಕಲಚೇತನರಿಗೆ ಮಾಸಾಶನ ಹಣ ಅವರ ಖಾತೆಗೆ ಜಮೆ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 