ಅಂಡರ್ -19 ವಿಶ್ವಕಪ್ : ದಿವ್ಯಾಂಶ್ ಬದಲಿಗೆ ಸಿದ್ಧೇಶ್ ವೀರ್ ಗೆ ಸ್ಥಾನ
ನವದೆಹಲಿ, ಜ.10: ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಲ್ ರೌಂಡರ್ ದಿವ್ಯಾಂಶ್ ಜೋಶಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 19 ವರ್ಷದೊಳಗಿನವರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದು, ಇವರ ಸ್ಥಾನವನ್ನು ಸಿದ್ಧೇಶ್ ವೀರ್ ತುಂಬಲಿದ್ದಾರೆ.
ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಿರಿಯರ ಆಯ್ಕೆ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಶುಕ್ರವಾರ ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ದಿವ್ಯಾಂಶ್ ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದು, ಈ ಗಾಯವು ವಿಶ್ವಕಪ್ ಆಡುವ ಅವರ ಕನಸಿಗೆ ಪೆಟ್ಟು ನೀಡಿದೆ.
ಆಯ್ಕೆ ಸಮಿತಿ ದಿವ್ಯಾಂಶ್ ಬದಲಿಗೆ ಮಹಾರಾಷ್ಟ್ರದ ಸಿದ್ಧೇಶ್ ವೀರ್ ಅವರನ್ನು ಭಾರತ ತಂಡಕ್ಕೆ ಸೇರಿಸಿದೆ. ಉತ್ತರ ಪ್ರದೇಶದ ಪ್ರಿಯಮ್ ಗರ್ಗ್ವಿಶ್ವಕಪ್ನಲ್ಲಿ ಭಾರತ ತಂಡದ ನಾಯಕತ್ವ ವಹಿಸುಕೊಂಡಿದ್ದಾರೆ. ಈ ವಿಶ್ವಕಪ್ಗೆ ತಯಾರಿ ನಡೆಸಲು ಭಾರತ ನಾಲ್ಕು ದಿನಗಳ ಏಕದಿನ ಪಂದ್ಯಾವಳಿಯನ್ನು ಗೆದ್ದುಕೊಂಡಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 