ಸರ್ವಜ್ಞ ಕವಿಯ ಸಂದೇಶ ಅರಿಯಿರಿ: ತಹಶೀಲ್ದಾರ್ ಬಿರಾದಾರ
Understand the message of the omniscient poet: Tahsildar Biradar
ಲೋಕದರ್ಶನ ವರದಿ
ದೇವರಹಿಪ್ಪರಗಿ 20: ಅಂದಿನ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅಸಮಾನತೆಯನ್ನು ಸಂತ ಕವಿ ಸರ್ವಜ್ಞರು ತ್ರಿಪದಿ ವಚನಗಳ ಮೂಲಕ ತಿದ್ದಿದರು. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ವಚನಗಳ ಸಂದೇಶವನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ಅಭಿಪ್ರಾಯಪಟ್ಟರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತ್ಯುತ್ಸವದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು.ಸಮಾಜದಲ್ಲಿ ಬದಲಾವಣೆ ಬರಬೇಕಾದರೆ ಮೊದಲು ಪ್ರತಿಯೊಬ್ಬರ ಮನಸ್ಥಿತಿ ಬದಲಾಗಬೇಕು. ಲಿಂಗ, ಜಾತಿ ತಾರತಮ್ಯ ಹೋಗಲಾಡಿಸಿ, ಸಮಾಜದಲ್ಲಿ ಸಮಾನತೆ ತರುವ ಸಲುವಾಗಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತ್ರಿಪದಿ ವಚನಗಳನ್ನು ರಚಿಸಿದ್ದಾರೆ. ಅಂತಹ ಪ್ರತಿಯೊಂದು ವಚನಗಳನ್ನು ಮಕ್ಕಳಿಗೆ ಕಲಿಸಬೇಕು. ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.
ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಜಿ.ಪಿ.ಬಿರಾದಾರ ಅವರು,ಉಪನ್ಯಾಸ ನೀಡಿ, ಸರ್ವಜ್ಞನು ಗರ್ವದಿಂದ ಕಲಿತವನಲ್ಲ, ಸರ್ವರೊಳು ಒಂದೊಂದು ನುಡಿ ಕಲಿತು ಸರ್ವಜ್ಞನಾದನು. 16ನೇ ಶತಮಾನದಲ್ಲಿ ಸರಳ ಭಾಷೆಯ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಮ್ಮ ತ್ರಿಪದಿಯ ವಚನಗಳ ಮೂಲಕ ತಿದ್ದುವ ಕೆಲಸ ಮಾಡಿದವರಲ್ಲಿ ಕವಿ ಸರ್ವಜ್ಞ ಒಬ್ಬರಾಗಿದ್ದಾರೆ. ಸರ್ವಜ್ಞ ಎಂಬುವುದು ಸರ್ವವನ್ನು ತಿಳಿದವರು ಎಂದು ಸರ್ವಜ್ಞನ ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಉಪತಹಸೀಲ್ದಾರ್ ಗಿರಿಜಾಬಾಯಿ ಸಜ್ಜನ, ಶಿರಸ್ತೇದಾರಗಳಾದ ಸುರೇಶ ಮ್ಯಾಗೇರಿ, ದಶರಥ ಭೋವಿ, ಸಮುದಾಯದ ಮುಖಂಡರುಗಳಾದ ಶಿವಾನಂದ ಕುಂಬಾರ, ಭೀಮರಾಯ ಕುಂಬಾರ, ಕಾಶಿನಾಥ ಕುಂಬಾರ, ಮಡಿವಾಳಪ್ಪ ಕುಂಬಾರ, ರಮೇಶ ಕುಂಬಾರ, ಬಸವರಾಜ ಕುಂಬಾರ, ಕಾಸಪ್ಪ ಕುಂಬಾರ, ಮಡಿವಾಳಪ್ಪ ಕುಂಬಾರ (ಮುಳಸಾವಳಗಿ) , ಚಿದಾನಂದ ಕುಂಬಾರ, ಬಸವರಾಜ ಕುಂಬಾರ, ಬಸವರಾಜ ಭದ್ರಗೊಂಡ, ರವಿ ಮೆಟಗಾರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 