ದಾಖಲೆಯ ಮಳೆಯ ಜೊತೆಗೆ 154 ಜಿಲ್ಲೆಗಳಲ್ಲಿ ಅನಾವೃಷ್ಠಿ..
ನವದೆಹಲಿ, ಅ 3: ಈ ಬಾರಿಯ ಮುಂಗಾರು ಕಳೆದ 25 ವರ್ಷಗಳಲ್ಲೇ ಗರಿಷ್ಠ, ದಾಖಲೆಯ ಮಳೆಯಾಗಿ ಹಲವು ರಾಜ್ಯಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಇನ್ನೂ 154 ಜಿಲ್ಲೆಗಳಲ್ಲಿ ಅನಾವೃಷ್ಟಿಯಿಂದಾಗಿ ಬರ ಪರಿಸ್ಥಿತಿಯೂ ಎದುರಾಗಿದೆ. ದೇಶದ 675 ಜಿಲ್ಲೆಗಳ ಪೈಕಿ ಶೇಕಡ 23 ಜಿಲ್ಲೆಗಳಲ್ಲಿ ಅಂದರೆ 154 ಜಿಲ್ಲೆಗಳಲ್ಲಿ ಮಳೆಯ ಕೊರತೆಯಿದೆ ಎಂದು ಹವಾಮಾನ ಇಲಾಖೆ ಅಂಕಿ ಅಂಶಗಳು ಹೇಳುತ್ತಿವೆ. ಈ ಪೈಕಿ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳು ಉತ್ತರ, ಪೂರ್ವ ಹಾಗೂ ಈಶಾನ್ಯ ಭಾರತಕ್ಕೆ ಸೇರಿವೆ. ವಾಡಿಕೆ ಮಳೆಗಿಂತ ಶೇಕಡ 20 ರಿಂದ 59ರಷ್ಟು ಕಡಿಮೆ ಮಳೆಯಾದ ಜಿಲ್ಲೆಗಳನ್ನು ಅತಿವೃಷ್ಟಿಪೀಡಿತ ಜಿಲ್ಲೆಗಳೆಂದು ಹವಾಮಾನ ಇಲಾಖೆ ನಿರ್ಧರಿಸುತ್ತದೆ. ಶೇಕಡ 60ಕ್ಕಿಂತ ಕಡಿಮೆ ಮಳೆಯಾದಲ್ಲಿ ಅದನ್ನು ತೀವ್ರ ಅಭಾವ ವರ್ಗಕ್ಕೆ ಸೇರಿಸಲಾಗುತ್ತದೆ. ಹರಿಯಾಣದಲ್ಲಿ ಗರಿಷ್ಠ ಅಂದರೆ 21 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದ್ದು, ಮೂರು ಜಿಲ್ಲೆಗಳಲ್ಲಿ ತೀವ್ರ ಅಭಾವ ತಲೆದೋರಿದೆ. ಮಳೆ ಅಭಾವ ಇರುವ ಮೂರನೇ ಒಂದರಷ್ಟು ಜಿಲ್ಲೆಗಳು ಅಂದರೆ 52 ಜಿಲ್ಲೆಗಳು ಅತ್ಯಧಿಕ ಕೃಷಿ ಉತ್ಪತ್ತಿ ಇರುವ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೆಹಲಿಗೆ ಸೇರಿದ ಜಿಲ್ಲೆಗಳು. ಈ ಪ್ರದೇಶದಲ್ಲಿ ಅಂತರ್ಜಲ ತೀವ್ರವಾಗಿ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 