ಉರ್ದು ಶಾಲೆಯಲ್ಲಿ ಸಮವಸ್ತ್ರ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು13: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ಇದ್ದಾಗ ಉತ್ತಮ ಶಿಕ್ಷಣ ಪಡೆದರೆ ಮುಂದಿನ ಜೀವನವು ಉಜ್ವಲವಾಗಲು ಸಾಧ್ಯವಾಗುತ್ತದೆ. ಕಾರಣ ಪಾಲಕರು ತಮ್ಮ ಮಕ್ಕಳ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ನಿರಂಜನಾನಂದ ಸ್ವಾಮಿಗಳು ಹೇಳಿದರು
ತಾಲೂಕಿನ ಹೆಡಿಯಾಲ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳಿಗೆ ಬಟ್ಟೆ. ಶೂ ವಿತರಿಸಿ ಮಾತನಾಡಿದರು. ಶಿಕ್ಷಣವು ಉತ್ತಮ ಗುಣಮಟ್ಟದ್ದಾಗಿದ್ದು ಮನುಷ್ಯ ಹುಟ್ಟಿದ ಮೇಲೆ ಸಾಧನೆ ಮಾಡಲು ಛಲ ಇರಬೇಕು, ಆ ಗುರಿಗಾಗಿ ನಿರಂತರ ಶೃಮವಿರಬೇಕು ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅದ್ಯಕ್ಷ ಎಸ್, ಎಚ್ ಮಜೀದ್ ಮಾತನಾಡಿ ಈ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಉರ್ದು ಶಾಲೆಯನ್ನು ಅಭಿವೃದ್ದಿ ಪಡಿಸಿದ್ದಾರೆ. ಶಾಲೆಯ ಕೈ ತೋಟ ಮಾಡಿ ಮಕ್ಕಳಿಗೆ ಬಿಸಿ ಊಟಕ್ಕೆ ಬೇಕಾದ ತರಕಾರಿ ಬೆಳೆದು ವಿವಿಧ ಹಣಿನ ಗಿಡಗಳನ್ನು ಬೆಳಸಿ ಈ ಶಾಲೆ ಇತರರಿಗೆ ಮಾದರಿಯಾಗುವಂತೆ ಮಾಡಿದ್ದಾರೆ ಎಂದರು ಹೆಡಿಯಾಲ ಗ್ರಾ.ಪಂ ಅದ್ಯಕ್ಷೆ ನಾಗಮ್ಮ ಕೋಳೂರು, ಪ್ರಧಾನ ಗುರು ಸಿ ಎಪ್ ಹುಲ್ಮನಿ ಶಿಕ್ಷಕಿ ಬಿ.ಜಿ ಕಲ್ಮನಿ, ಪರಿವರ್ತನಾ ಸಂಚಾಲಕಿ ಹಸಿನಾ ಹೆಡಿಯಾಲ, ಚಂದ್ರು ಹಾರನಹಳ್ಳಿ ಬಿ ಪಿ ಬಿದರಿ ಸೇರಿದಂತೆ ಮತ್ತಿತರರು ಇದ್ದರು
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 