ಉನ್ನಾವೋ ಘಟನೆ : ಸಿಎಂ ಬರುವವರೆಗೂ ಅಂತ್ಯ ಸಂಸ್ಕಾರ ನಡೆಸದಿರಲು ಬಿಗಿಪಟ್ಟು
ಲಕ್ನೋ, ಡಿ 8 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡುವವರೆಗೂ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬದ ಸದಸ್ಯರು ಬಿಗಿಪಟ್ಟು ಹಿಡಿದಿದ್ದಾರೆ. ಶನಿವಾರ ಸಂಜೆಯೇ ಸಂತ್ರಸ್ತೆಯ ಮೃತದೇಹ ಉನ್ನಾವೋ ಗ್ರಾಮ ತಲುಪಿದ್ದು , ಇಂದು ಅಂತ್ಯಸಂಸ್ಕಾರ ನೆರವೇರಿಸಿಬೇಕಿತ್ತು. ಆದರೇ ಮುಖ್ಯಮಂತ್ರಿ ಭೇಟಿ ನೀಡುವವರೆಗೂ ಅಂತಿಮ ವಿಧಿ ವಿಧಾನ ನೆರವೇರಿಸುವುದಿಲ್ಲವೆಂದು ಕುಟುಂಬದ ಸದಸ್ಯರು ಬಿಗಿ ಪಟ್ಟು ಹಾಕಿದ್ದಾರೆ. ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಸಾವು -ಬದಕಿನ ಹೋರಾಟ ನಡೆಸಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ರಾತ್ರಿ ದೆಹಲಿಯಲ್ಲೀ ಕೊನೆಯುಸಿರೆಳೆದಿದ್ದರು. ಆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದ ಸಚಿವರು ಸಂತ್ರಸ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು.ಈ ವೇಳೆ ಗ್ರಾಮದಲ್ಇ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕುಟುಂಬದ ಸದಸ್ಯರಿಗೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನೀಡುವ ಭರವಸೆ ಕೊಡಲಾಗಿತ್ತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 