ಉನ್ನಾವೋ ಅತ್ಯಾಚಾರ ಪ್ರಕರಣ: ಆರೋಪಿ ಶಾಸಕ ಬಿಜೆಪಿಯಿಂದ ಅಮಾನತು
ಲಕ್ನೋ 30: ಉನ್ನಾವೋ ಅತ್ಯಾಚಾರ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೂಡ ನಡೆಯುತ್ತಿದೆಎಂದೂ ಅವರು ಪ್ರತಿಪಾದಿಸಿದರು.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಆಡಳಿತಾರೂ ಢ ಬಿಜೆಪಿ ಬೆಂಬಲವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್, ಬಿಎಸ್ಪಿ ಮತ್ತು ಎಸ್ಪಿ ಸೇರಿ ಅನೇಕ ಪಕ್ಷದ ನಾಯಕರು ಆರೋಪಿಸಿದ್ದರು. ಜೈಲಿನಲ್ಲಿರುವ ಬಿಜೆಪಿ ಶಾಸಕ ಸೆಂಗಾರ್ ಮತ್ತು ಇತರ 9 ಮಂದಿಯ ಮೇಲೆ ಸೋಮವಾರ ಕೊಲೆ ಪ್ರಕರಣ ದಾಖಲಿಸಲಾಗಿದೆ, 19 ವರ್ಷದ ಅತ್ಯಾಚಾರ ಸಂತ್ರಸ್ಥೆ ಹಾಗೂ ಅವರ ಕುಟುಂಬ, ವಕೀಲರು ಪ್ರಯಾಣಿಸುತ್ತಿದ್ದ ಕಾರು ರಾಯ್ ಬರೇಲಿಯಲ್ಲಿ ಟ್ರಕ್ ಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದರು. ಅಲ್ಲದೆ ಘಟನೆಯಲ್ಲಿ ಸಂತ್ರಸ್ಥೆ ಹಾಗೂ ಅವಳ ವಕೀಲರು ಗಂಭೀರ ಗಾಯಗೊಂಡಿದ್ದಾರೆ.
ಭಾನುವಾರದ ಕಾರು ಅಪಘಾತದ ಹಿಂದೆ "ಪಿತೂರಿ" ಇದೆ ಎಂದು ಆರೋಪಿಸಿ ಸಂಸ್ತ್ರಸ್ಥೆಯ ಕುಟುಂಬ ದೂರು ದಾಖಲಿಸಿದೆ. ಆಕೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಧರಣಿ ಕುಳಿತಿದ್ದಾರೆ. ಸಂತ್ರಸ್ಥೆಯ ಚಿಕ್ಕಪ್ಪ ಜೈಲಿನಲ್ಲಿರುವ ಮಹೇಶ್ ಸಿಂಗ್ ತನ್ನ ಪತ್ನಿಯ ಕೊನೆಯ ವಿಧಿಗಾಗಿ ಪೆರೋಲ್ ಕೋರಿದ್ದು ನ್ಯಾಯಾಲಯ ಅವರಿಗೆ ದೊನ ಮಟ್ಟಿಗೆ ಪೆರೋಲ್ ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 