ಅವೈಜ್ಞಾನಿಕ ಒಳ ಸೇತುವೆ ನಿರ್ಮಾಣ : ಬೆಳೆ ಹಾನಿ, ರೈತರ ಪ್ರತಿಭಟನೆ
ಲೋಕದರ್ಶನವರದಿ
ರಾಣೇಬೆನ್ನೂರು09: ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ನಗರ ಹೊರವಲಯದ ದೇವರಗುಡ್ಡ ರಸ್ತೆಯ ಹೊಸದಾಗಿ ನಿಮರ್ಿಸಲಾಗುತ್ತಿವರು ರೈಲ್ವೆ ಒಳ ಸೇತುವೆಯಲ್ಲಿ ನದಿ ಆಕಾರದಲ್ಲಿ ನೀರು ತುಂಬಿದ್ದರಿಂದ ಹರಿದ ನೀರು ಹೊಲಗಳಿಗೆ ನುಗ್ಗಿ ಲಕ್ಷಾಂತರ ರೂಪಾಯಿಗಳ ಗೋವಿನಜೋಳ ಬೆಳೆಗಳು ಸಂಪೂರ್ಣ ಹಾನಿಗೊಂಡಿದೆ. ಸ್ಥಳಕ್ಕೆ ಧಾವಿಸದ ಜಮೀನು ಮಾಲೀಕರು ನೀರಾವೃತಗೊಂಡು ಹಾನಿಗೊಳಗಾದ ಬೆಳೆಗಳನ್ನು ಕಿತ್ತು ರಸ್ತೆಗೆ ಚಲ್ಲಿ ಪ್ರತಿಭಟಿಸಿದರು.
ಈ ರಸ್ತೆಯು ಬಾಗಲಕೋಟೆ, ಬಿಳಿಗಿರಿ ರಂಗನಬೆಟ್ಟ ಸಂಚಾರಿ ಸಂಪರ್ಕ ರಸ್ತೆಯಾಗಿದ್ದು, ಒಳ ಸೇತುವೆ ನಿಮರ್ಾಣದಿಂದ ಯಾವುದೇ ಪ್ರಯೋಜನ ಕಾಣದಂತಾಗಿದೆ. ಇದು ಅವೈಜ್ಞಾನಿಕವಾಗಿದ್ದು, ಕೂಡಲೇ ಇಲ್ಲಿ ಮೇಲ್ಸೇತುವೆ ನಿರ್ಮಾಣವಾಗಬೇಕು ಇದರಿಂದ ಸಂಚಾರ ಸುಗಮವಾಗಲಿದೆ.
ಇಲ್ಲವಾದರೆ, ಈ ಭಾಗದ ಸಂಚಾರ ಸುಗಮ ಕಾಣದೇ ನಿತ್ಯ ಜನ-ಜಾನುವಾರುಗಳು, ವಾಹನಗಳಿಗೆ ಸಂಪರ್ಕ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಾ ನಿರತರು ಮತ್ತು ಹುಲ್ಲತ್ತಿ, ನಗರದ ನಾಗರೀಕರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಜಗದೀಶ ಕೆರೋಡಿ, ಪ್ರಭುಸ್ವಾಮಿ ಕರ್ಜಗಿಮಠ ಸೇರಿದಂತೆ ನೂರಾರು ರೈತರು ಪಾಲ್ಗೊಂಡ್ಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 