ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ, ತರುಣ್
ಬೆಂಗಳೂರು, ಮೇ 8, ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಶುಕ್ರವಾರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್, ಕಾಶಿನಾಥ್ ಅವರನ್ನು ಸ್ಮರಿಸಿಕೊಂಡಿದ್ದಾರೆ.ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು 2018ರಲ್ಲಿ ಕೊನೆಯುಸಿರೆಳೆದರು.ಇಂದು ಅವರ ಅಪ್ಪಟ ಶಿಷ್ಯ ನಟ ಉಪೇಂದ್ರ ಅವರು ಕಾಶೀನಾಥ್ ಅವರನ್ನು ಸ್ಮರಿಸುವ ಮೂಲಕ "ಅರಿವು ತೋರಿಸಿಕೊಟ್ಟ ಗುರುವಿಗೆ ಹುಟ್ಟುಹಬ್ಬದ ಶುಭಾಶಯ" ಎಂದು ಟ್ವೀಟ್ ಮಾಡಿದ್ದಾರೆ.ಇನ್ನು,ನಿರ್ದೇಶಕ ತರುಣ್ ಸುಧೀರ್ ಅವರು ಚೌಕ ಚಿತ್ರದ ಅವರೊಂದಿಗಿನ ಫೋಟೋ ಒಂದವನ್ನು ಶೇರ್ ಮಾಡಿ, ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಜೀವನದ ಅತ್ಯುತ್ತಮ ಘಳಿಗೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 