ಗ್ರಾಮೀಣ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ
Urge to complete rural road works
ಲೋಕದರ್ಶನ ವರದಿ
ಹೂವಿನಹಡಗಲಿ 28: ತಾಲ್ಲೂಕಿನ ಹಿರೇಹಡಗಲಿ, ಉತ್ತಂಗಿ, ಇಟ್ಟಿಗಿ ಮಾರ್ಗದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಭಗತ್ಸಿಂಗ್ ಯುವಜನ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ವೇದಿಕೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯನ್ನು ಉತ್ತಂಗಿ, ಇಟ್ಟಿಗಿ ಬಳಿ ಅಗೆದು ಜಲ್ಲಿಕಲ್ಲು ಸುರಿಯಲಾಗಿದೆ ಹಾಗೂ ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯ ರಸ್ತೆ ದುರಸ್ತಿ ಮಾಡಿ ಎಂದು ಆಗ್ರಹಿಸಿದರು.ರೈತ ಸಂಘದ ಕಾರ್ಯದರ್ಶಿ ಎಂ.ಶಿವರಾಜ, ಭಗತ್ ಸಿಂಗ್ ವೇದಿಕೆಯ ಬಿ.ಮಲ್ಲಿಕಾರ್ಜುನ, ಶಬೀರ್ ಬಾಷಾ, ಮುಜುಬು ರಹಿಮಾನ್, ಎಐಕೆಎಂಎಸ್ ಅಧ್ಯಕ್ಷ ಪಕ್ಕೀರ್ಪ ಬೀರಬ್ಬಿ ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 